
ರಾಯಚೂರು (ಡಿ.18): ಅಯೋಧ್ಯ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಈಗಾಗಲೇ ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗಿವೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಆಯೋಧ್ಯೆ ಸಂಪೂರ್ಣ ಅಲಂಕಾರಗೊಂಡಿದೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದೇಶಾದ್ಯಂತ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಆಹ್ವಾನ ನೀಡಲಾಯಿತು.
ರಾಮಮಂದಿರ ಉದ್ಘಾಟನೆಗೆ ಮಂತ್ರಾಲಯ ಶ್ರೀಗಳಿಗೆ ಆಹ್ವಾನ ನೀಡಿದ ವಿಎಚ್ಪಿ ರಾಜ್ಯಾದ್ಯಕ್ಷ ಸಾಯಿರೆಡ್ಡಿ. ನಿನ್ನೆ ಮಂತ್ರಾಲಯದ ಮಠಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದು ರಾಮಮಮದಿರ ಉದ್ಘಾಟನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಶ್ರೀಗಳಿಗೆ ಆಮಂತ್ರಣ ಪತ್ರಿಕೆ ನೀಡಿದರು. ಆಮಂತ್ರಣ ಪತ್ರ ಸ್ವೀಕರಿಸಿದ ಶ್ರೀಗಳು ಬರುವುದಾಗಿ ಹೇಳಿ ಆರ್ಶಿವಾದಿಸಿದರು.
ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್. ಡಿ. ದೇವೇಗೌಡರಿಗೆ ಆಹ್ವಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ