'ಅದೇನು ದುರ್ಬುದ್ಧಿ ಬಂದಿದೋ ಗೊತ್ತಿಲ್ಲ; ದುರ್ಯೋಧನ ರೀತಿ ಆಡ್ತಾರೆ : ರಜೆ ಘೋಷಿಸದ ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

Published : Jan 21, 2024, 08:18 PM IST
'ಅದೇನು ದುರ್ಬುದ್ಧಿ ಬಂದಿದೋ ಗೊತ್ತಿಲ್ಲ; ದುರ್ಯೋಧನ ರೀತಿ ಆಡ್ತಾರೆ : ರಜೆ ಘೋಷಿಸದ ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಸಾರಾಂಶ

ನಾಳೆ ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಆಗಲಿದೆ. ಈ ಕ್ಷಣಕ್ಕಾಗಿ ದೇಶಾದ್ಯಂತ ರಾಮಭಕ್ತರು ಕಾದಿದ್ದಾರೆ. ದೇಶಾದ್ಯಂತ ಸಂಭ್ರಮದ ವಾತಾವರಣವಿದೆ. ಪದ್ಮನಾಭನಗರದಲ್ಲೂ ರಾಮನ ಪ್ರತಿಷ್ಠಾಪನೆ ಆಗಿದೆ. ನಾಳಿನ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಲಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು.

ಬೆಂಗಳೂರು (ಜ.21): ನಾಳೆ ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಆಗಲಿದೆ. ಈ ಕ್ಷಣಕ್ಕಾಗಿ ದೇಶಾದ್ಯಂತ ರಾಮಭಕ್ತರು ಕಾದಿದ್ದಾರೆ. ದೇಶಾದ್ಯಂತ ಸಂಭ್ರಮದ ವಾತಾವರಣವಿದೆ. ಪದ್ಮನಾಭನಗರದಲ್ಲೂ ರಾಮನ ಪ್ರತಿಷ್ಠಾಪನೆ ಆಗಿದೆ. ನಾಳಿನ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಲಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು.

ಇಂದು ಪದ್ಮನಾಭನಗರದಲ್ಲಿ ರಾಮೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ದೇಶಾದ್ಯಂತ ಹಲವು ರಾಜ್ಯಗಳು ರಜೆ ಘೋಷಿಸಿವೆ. ಹಿಮಾಚಲ ಪ್ರದೇಶದಲ್ಲೂ ರಜೆ ಘೋಷಣೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಸಿದ್ದರಾಮಯ್ಯನವರಿಗೆ ಅದೇನು ದುರ್ಬುದ್ಧಿ ಬಂದಿದೆಯೋ ಗೊತ್ತಿಲ್ಲಕ. ನಾಳೆ ರಜೆ ಕೊಟ್ಟಿದ್ರೆ ಲಕ್ಷಾಂತರ ಜನರು ರಾಮನ ಪೂಜೆ ಮಾಡ್ತಿದ್ರು. ಆದರೆ ರಜೆ ಘೋಷಣೆ ಮಾಡಿದ್ರೆ ಎಲ್ಲಿ ರಾಮನ ಪೂಜೆ ಜಾಸ್ತಿ ಆಗಿಬಿಡುತ್ತೋ ಅಂತಾ ಹೀಗೆ ಮಾಡಿದ್ದಾರೆ ಎಂದು ರಜೆ ಘೋಷಣೆ ಮಾಡದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನಾಳೆ ಅಯೋಧ್ಯೆ ಬಾಲರಾಮ ಪ್ರಾಣಪ್ರತಿಷ್ಠೆ: ಕಾಫಿನಾಡು ಚಿಕ್ಕಮಗಳೂರಲ್ಲಿ ಸಂಭ್ರಮ!

ಅಯೋಧ್ಯಾ ರಾಮಮಂದಿರಕ್ಕಾಗಿ ಮೂರುನಾಲ್ಕು ಲಕ್ಷ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ರಜೆ ಘೋಷಿಸಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಆಂಜನೇಯ ಒಳ್ಳೆ ಬುದ್ದಿ ಕೊಡಲಿ. ಈಗಲೂ ಸಮಯ ಮಿಂಚಿಲ್ಲ  ರಜೆ ಘೋಷಣೆ ಮಾಡ್ತಾರೆ ಅಂತ ನಂಬಿಕೆ ಇದೆ ಎಂದರು.

ರಾಮ ಎಲ್ಲರಿಗೂ ಸೀಮಿತವಾದ ವ್ಯಕ್ತಿ. ಎಲ್ಲೂ ಪ್ಲಕ್ಸ್ ಕೀಳುವ ಕೆಲಸ ಮಾಡಬೇಡಿ. ರಾಮ ಎಲ್ಲರಿಗೂ ಒಂದೆ. ಈಗಾಗಲೇ ರಜೆ ಕೊಡುವಂತೆ ಪತ್ರವನ್ನೂ ಸಹ  ಕೊಟ್ಟಿದ್ದೇನೆ. ದುರ್ಯೋಧನನ ರೀತಿ ಹಠ ಮಾಡಬೇಡಿ. ರಾಮನ ಭಜನೆ ಮಾಡೋಕೆ ಅವಕಾಶ ಕೊಡಿ. 7 ಕೋಟಿ ಕನ್ನಡಿಗರ ಪರವಾಗಿ ಕೈಮುಗಿದು ವಿನಂತಿ ಮಾಡ್ತಿನಿ. ನಾಳೆ ರಾಮನ ಪೂಜೆ ಮಾಡಲು ಅವಕಾಶ ಮಾಡಿಕೊಡಿ ವಿನಂತಿಸಿದರು. 

ಜ.22 ರಂದು ರಜೆ ಬೇಕೋ ಬೇಡ್ವೋ?: ನಾನೂ ಹಿಂದೂನೇ, ಆದರೆ ನನಗೆ ರಜೆ ಬೇಡ ಎಂದ ಮಹಿಳೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ