ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಧ್ವನಿ ಎತ್ತಿದ ಬಾಬಾ ರಾಮದೇವ್

Published : Jan 29, 2020, 08:30 PM ISTUpdated : Jan 29, 2020, 10:14 PM IST
ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಧ್ವನಿ ಎತ್ತಿದ ಬಾಬಾ ರಾಮದೇವ್

ಸಾರಾಂಶ

ಜನವರಿ 30 ರಿಂದ ಫೆ 3 ರವರೆಗೆ ಹುಬ್ಬಳ್ಳಿಯ ಯೋಗ ಶಿಬಿರ ಹಿನ್ನೆಲೆಯಲ್ಲಿ ನಗರಕ್ಕಾಗಮಿಸಿರುವ ಬಾಬಾ ರಾಮದೇವ ಸುದ್ದಿಗೋಷ್ಠಿಯಲ್ಲಿ ಶಿವಕುಮಾರ ಸ್ವಾಮೀಜಿ ಹಾಗೂ ಸಿಎಎ ಬಗ್ಗೆ ಮಾತನಾಡಿದರು. ಹಾಗಾದ್ರೆ ಏನೆಲ್ಲ ಮಾತನಾಡಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.  

ಹುಬ್ಬಳ್ಳಿ, [ಜ.29];  ಈ ಸಾರಿ ಪದ್ಮಶ್ರಿ, ಪದ್ಮಭೂಷಣ ಪ್ರಶಸ್ತಿಗಳು ಕೆಲವು ಸಂತರಿಗೆ ನೀಡಿದೆ. ಸಾಧು ಸಂತರಿಗೆ ಭಾರತರತ್ನ ಕೂಡಾ ನೀಡಬೇಕು ಎಂದು ಹೇಳಿದರು. 

ಜನವರಿ 30 ರಿಂದ ಫೆ 3 ರವರೆಗೆ ಹುಬ್ಬಳ್ಳಿಯ ಯೋಗ ಶಿಬಿರ ಹಿನ್ನೆಲೆಯಲ್ಲಿ ನಗರಕ್ಕಾಗಮಿಸಿರುವ ಬಾಬಾ ರಾಮದೇವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದ ಶಿವಕುಮಾರ ಸ್ವಾಮೀಜಿಯಂತ‌ ಮಹಾನ್ ಸಂತರು ಇದ್ದಾರೆ. ಅಂತಹವರಿಗೆ ಮೋದಿ ಸರ್ಕಾರ ಭಾರತ ಭಾರತ ರತ್ನ ನೀಡಬೇಕು ಎಂದು ಆಗ್ರಹಿಸಿದರು.

ನಡೆದಾಡುವ ದೇವರಿಗೆ 'ಭಾರತ ರತ್ನ': ಪ್ರಧಾನಿಗೆ ಮತ್ತೆ ಪತ್ರ ಬರೆದ ಸಿಎಂ

ಇದೇ ವೇಳೆ ಸಿಎಎ ಬಗ್ಗೆ ಪ್ರತಿಕ್ರಿಯಿಸಿ, ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ಮುಸ್ಲಿಂ ಬಾಂಧವರಲ್ಲಿ ತಪ್ಪು ಕಲ್ಪನೆ ಬಿತ್ತಲಾಗಿದೆ. ದೇಶದ ಯಾವುದೇ ನಾಗರಿಕರನ್ನು ಕೂಡ ಹೊರ ಹಾಕಲಾಗುತ್ತದೆ ಎಂದು ಎಲ್ಲಿಯೂ ಕೂಡ ಹೇಳಿಲ್ಲ. ಇದರ ಬಗ್ಗೆ ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಯೋಗಗುರು ಬಾಬಾ ರಾಮದೇವ ತಿಳಿಸಿದರು.

ಭಾರತೀಯ ಮುಸ್ಲಿಂರಲ್ಲಿ ಪ್ರತಿಶತ 90 ರಷ್ಟು ಜನ ದೇಶ ಭಕ್ತರಿದ್ದಾರೆ.ಅಲ್ಲದೇ ದೇಶದಲ್ಲಿ ಯಾವುದೇ ಜಾತಿ ನಾಗರಿಕರಿಗೂ ಕೂಡ ಪೌರತ್ವ ತಿದ್ದುಪಡಿ ಕಾಯಿದೆಯಿಂದ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಿಂದೂ ಮುಸ್ಲಿಂ ಎಲ್ಲರೂ ಸೇರಿ ದೇಶವನ್ನು ಮೇಲೆತ್ತುವ ಕೆಲಸ ಮಾಡಬೇಕು. ದೇಶದಲ್ಲಿ ಏಕತಾ ಭಾವನೆ ಬೆಳೆಸಿಕೊಂಡು ಜೀವನ ನಡೆಸಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ