
ಬೆಂಗಳೂರು, (ಮಾ.12): ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ 2 ಎ ಗೆ ಸೇರ್ಪಡೆ ಮಾಡುವ ಕುರಿತಾಗಿ, ಬಸವ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ವಚನನಂದಾ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿರುವುದಕ್ಕೆ ಸಚಿವರಾದ ಮುರುಗೇಶ್ ನಿರಾಣಿ ಹಾಗೂ ಸಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಮಾಚ್೯ 22 ರಂದು (ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮ ಮಠದ ಶ್ರೀಗಳು ಹಾಗೂ ಹರಿಹರ ಪೀಠದ ವಚನನಂದಾ ಸ್ವಾಮೀಜಿಗಳಿಗೆ ಪತ್ರ ಬರೆದಿರುವುದು 'ಸಕಾರಾತ್ಮಕ' ಬೆಳವಣಿಗೆ ಎಂದು ಬಣ್ಣಿಸಿದ್ದಾರೆ.
ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ
ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಅವರು, ಪತ್ರ ಬರೆದು ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2 ಗೆ ಸೇರ್ಪಡೆ ಮಾಡುವ ಬಗ್ಗೆ ತಮ್ಮಲ್ಲಿ ಯಾವುದೇ ರೀತಿಯ ದಾಖಲೆಗಳು ಇದ್ದರೆ, ಖುದ್ದು ಹಾಜರಾಗಿ ಇಲ್ಲವೇ ಸಂಬಂಧಿಪಟ್ಟವರ ಮೂಲಕ ಮಾಹಿತಿಯನ್ನು ನೀಡಬಹುದು ಎಂದು ಉಭಯ ಶ್ರೀಗಳಿಗೆ ಪತ್ರ ಮೂಲಕ ಮನವಿ ಮಾಡಲಾಗಿದೆ.
ಆಯೋಗವು ಸಮುದಾಯದ ಬೇಡಿಕೆಗೆ ಸ್ಪಂದಿಸಿ ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿರುವುದು ಸರಿಯಾದ ಕ್ರಮವಾಗಿದೆ. ಖಂಡಿತವಾಗಿಯೂ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವನ್ನು ಸಚಿವರುಗಳು ವ್ಯಕ್ತಪಡಿಸಿದ್ದಾರೆ. ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ