ಕಣ್ತುಂಬಿಕೊಳ್ಳಿ ಬಾದಾಮಿ ಬನಶಂಕರಿ ದೇವಿ ನಾನ್ಸ್ಟಾಪ್ ಜಾತ್ರೆ!

Published : Jan 24, 2019, 07:26 PM ISTUpdated : Jan 24, 2019, 08:11 PM IST
ಕಣ್ತುಂಬಿಕೊಳ್ಳಿ ಬಾದಾಮಿ ಬನಶಂಕರಿ ದೇವಿ ನಾನ್ಸ್ಟಾಪ್ ಜಾತ್ರೆ!

ಸಾರಾಂಶ

ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿ ಜಾತ್ರೆ ಅಂದರೆ ಅಪ್ಪ-ಅವ್ವನ್ನ ಬಿಟ್ರೆ ಎಲ್ಲವೂ ಸಿಗೋ ಜಾತ್ರೆ ಬನಶಂಕರಿ ಜಾತ್ರೆ  ಪ್ರಸಿದ್ಧಿ ಪಡೆದಿದೆ.  

ಮಲ್ಲಿಕಾರ್ಜುನ ಹೊಸಮನಿ

ಬಾದಾಮಿ(ಜ.24): ಸಾಮಾನ್ಯವಾಗಿ ಜಾತ್ರೆ ಅಂದ್ರೆ ಸಾಕು ಒಂದು ದಿನವೋ ಅಥವಾ ಐದು ದಿನವೋ ನಡೆಯೋದು ಸಾಮಾನ್ಯ. ಆದ್ರೆ ಜಾತ್ರೆಯೊಂದು ಹಗಲು ರಾತ್ರಿ ನಿರಂತರವಾಗಿ ಲಕ್ಷಾಂತರ ಜನರ ಮಧ್ಯೆ ಒಂದು ತಿಂಗಳುಗಳ ಕಾಲ ನಡೆಯುತ್ತೇ ಅಂದ್ರೆ ವಿಶೇಷವೇ ಸರಿ.  

ಇಂತಹವೊಂದು ಅಪರೂಪದ ಜಾತ್ರೆ ನಡೆಯೋದು ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿಯಲ್ಲಿ. ಅಪ್ಪ-ಅವ್ವನ್ನ ಬಿಟ್ರೆ ಎಲ್ಲವೂ ಸಿಗೋ ಜಾತ್ರೆ ಬನಶಂಕರಿ ಜಾತ್ರೆ  ಪ್ರಸಿದ್ಧಿ ಪಡೆದಿದೆ.

"
 
ಪ್ರತಿವರ್ಷ ಬನದಹುಣ್ಣಿಮೆಯಿಂದ  ಒಂದು ತಿಂಗಳ ಕಾಲ ನಡೆಯೋ ಈ ಜಾತ್ರೆಯ ವಿಶೇಷವೇ ಹತ್ತು ಹಲವು. ಹಿಂದೆ ಬಾದಾಮಿ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರೋ ಈ ದೇವಾಲಯ ಪುರಾತನವಾಗಿದ್ದು, ತನ್ನದೇಯಾದ ವೈಶಿಷ್ಟ್ಯತೆಯನ್ನ ಹೊಂದಿದೆ.

ಹಲವು ಪ್ರತೀತಿಯೊಂದಿಗೆ ಜನಪ್ರಿಯಗೊಂಡಿರೋ ಈ ಜಾತ್ರೆ ಬಂದ್ರೆ ಸಾಕು ಜನ ಒಂದು ತಿಂಗಳ ಮುಂಚೆಯೇ ತಯಾರಿ ನಡೆಸ್ತಾರೆ. ಯಾಕಂದ್ರೆ ಇದು ಒಂದು ತಿಂಗಳುಗಳ ಕಾಲ ಹಗಲು ರಾತ್ರಿ ವೇಳೆ ನಡೆಯುವಂತ ಜಾತ್ರೆ ಅನ್ನೋದು ವಿಶೇಷ.

"

ಹೀಗಾಗಿ ಬೆಳಗಿನ ವೇಳೆಯಲ್ಲಿ ಕಿಟಕಿ, ಬಾಗಿಲು, ಬೀಸುವ ಕಲ್ಲು, ಬಾಂಡೆ ಸಾಮಾನು ಹೀಗೆ ಮನೆಗೆ ಬೇಕಾಗೋ ಸಾಮಾನುಗಳು, ರೈತಾಪಿ ವರ್ಗದ ಸಲಕರಣೆಗಳು, ಸಿಹಿ ತಿಂಡಿ-ತಿನಿಸು ಹೀಗೆ ಜನ್ರ ಖರೀದಿಯ ಭರಾಟೆ ಜೋರಾಗಿದ್ರೆ ಸಂಜೆಯಾದ್ರೆ ಸಾಕು ರಾತ್ರಿಯಿಡೀ ನಾಟಕಗಳ ಮತ್ತು ಸಿನಿಮಾಗಳ ಭರಾಟೆ ಜೋರಾಗಿಯೇ ಇರುತ್ತದೆ. 

ಈ ಮಧ್ಯೆ ಈ ಬಾರಿ ಸ್ಥಳೀಯ ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯ ರಥೋತ್ಸವಕ್ಕೆ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ್ರು. ಲಕ್ಷಾಂತರ ಜನ್ರ ಮಧ್ಯೆಯೇ ಸಿದ್ದರಾಮಯ್ಯ ನಿಂತು ರಥೋತ್ಸವದ ಬಳಿಕ ಬನಶಂಕರಿ ದೇವಿ ದರ್ಶನ ಪಡೆದು ಮರಳಿದ್ರು. ಇನ್ನು ಈ ಜಾತ್ರೆಗೆ ದೂರದ ಬೆಂಗಳೂರು, ಮೈಸೂರು, ಗುಲ್ಬರ್ಗಾ ಸೇರಿದಂತೆ ರಾಜ್ಯವಲ್ಲದೆ ಮಹಾರಾಷ್ಟ್ರದಿಂದಲೂ ಯಥೇಚ್ಚವಾಗಿ ಭಕ್ತರು ಹರಿದು ಬಂದು ದೇವಿಯ ಆಶೀರ್ವಾದ ಪಡೆಯುತ್ತಾರೆ.

"

ಒಟ್ಟಿನಲ್ಲಿ ಇಂದಿನ ಕಂಪ್ಯೂರ್ ಯುಗದಲ್ಲೂ ಒಂದು ತಿಂಗಳವರೆಗೆ ಜಾತ್ರೆ ನಡೆಯುವುದು ಹೆಮ್ಮೆಯ ಸಂಗತಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ