ಬಾಗಲಕೋಟೆ: ಈದ್ ಮಿಲಾದ್ ಮೆರವಣಿಗೆಯಲ್ಲಿ ಹಮಾಸ್ ಚಿತ್ರಗಳ ಪ್ರದರ್ಶನ, ಹಿಂದೂಪರ ಸಂಘಟನೆಗಳು ಆಕ್ರೋಶ

Published : Sep 11, 2025, 08:30 AM ISTUpdated : Sep 11, 2025, 08:31 AM IST
Bagalkote eid milad controversy

ಸಾರಾಂಶ

ಬಾಗಲಕೋಟೆಯ ಈದ್ ಮಿಲಾದ್ ಮೆರವಣಿಗೆಯಲ್ಲಿ ಹಮಾಸ್ ನಾಯಕರ ಭಾವಚಿತ್ರ ಪ್ರದರ್ಶನ ವಿವಾದಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಾಗಲಕೋಟೆ (ಸೆ.11): ಬಾಗಲಕೋಟೆ ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿಯ ಕಟೌಟ್‌ನಲ್ಲಿ ಹಮಾಸ್ ಲೀಡರ್‌ಗಳ ಭಾವಚಿತ್ರಗಳು ಕಂಡುಬಂದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಭಾವಚಿತ್ರದಲ್ಲಿ ಪ್ಯಾಲಿಸ್ತೀನ್ ಧ್ವಜವನ್ನು ಹಿಂದೂಪರ ಸಂಘಟನೆಗಳು ಗಮನಿಸಿದ ಬಳಿಕ, ಕಿಡಿಗೇಡಿಗಳು ಧ್ವಜವನ್ನು ಮರೆಮಾಚಲು ಹಸಿರು ಬಟ್ಟೆಯನ್ನು ಅಂಟಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಕುರಿತು ಕೆಲವು ವ್ಯಕ್ತಿಗಳು ಸಾಮಾಜಿಕ ಜಾ ಲತಾಣಗಳಲ್ಲಿ ಸ್ಟೇಟಸ್‌ಗಳನ್ನು ಹಂಚಿಕೊಂಡಿದ್ದಾರೆ, ಇದು ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಹಿಂದೂಪರ ಸಂಘಟನೆಗಳು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ.

ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ರೂ ಅರೆಸ್ಟ್ ಇಲ್ಲ, 500 ಜನ ದೇಶಭಕ್ತರ ಮೇಲೆ ಕೇಸು, ಸಿಎಂ ಸಿದ್ದರಾಮಯ್ಯ ನೀವು ದೇಶದ್ರೋಹಿಗಳ ಪರ ಇದ್ದೀರಾ?: ಕೆಎಸ್ ಈಶ್ವರಪ್ಪ ಗರಂ

ಬಾಗಲಕೋಟೆ ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾಯಿಸಿ, ಘೋಷಣೆಗಳ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ನಗರದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳೀಯ ಆಡಳಿತವು ಶಾಂತಿ ಕಾಪಾಡಲು ಕ್ರಮ ಕೈಗೊಂಡಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ತಪ್ಪಿತಸ್ಥರನ್ನು ಶೀಘ್ರದಲ್ಲಿ ಪತ್ತೆಹಚ್ಚುವುದಾಗಿ ಭರವಸೆ ನೀಡಿದ್ದಾರೆ. ಈ ಘಟನೆಯಿಂದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾಗದಂತೆ ಎಲ್ಲರೂ ಸಂಯಮ ವಹಿಸುವಂತೆ ಸ್ಥಳೀಯ ನಾಯಕರು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌