
ಬಾಗಲಕೋಟೆ, (ನ.13): ರಬಕವಿ ಬನಹಟ್ಟಿ ತಾಲೂಕಿನ ಸೈದಾಪೂರ್ನ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬೆಂಕಿ ಅವಘಡದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಸಂಭವಿಸಿತು. ಈ ಘಟನೆಯಲ್ಲಿ ಬಾಗಲಕೋಟೆ ಜಿಲ್ಲಾ ಆಡಿಷನಲ್ ಎಸ್ಪಿ (ಎಎಸ್ಪಿ) ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಕಲ್ಲು ಬಲವಾಗಿ ತಾಗಿ ಗಂಭೀರ ಗಾಯವಾದಿದ್ದು, ಕಾಲು ಪ್ರ್ಯಾಕ್ಚರ್ ಆಗಿದೆ.
ಕಲ್ಲು ತೂರಾಟ ನಡೆದ ವೇಳೆ ಪರಿಸ್ಥಿತಿ ನಿಯಂತ್ರಿಸಲು ತೊಡಗಿದ್ದ ಮಹಾಂತೇಶ್ವರ್ ಜಿದ್ದಿ ಅವರು ಉದ್ರಿಕ್ತ ಗುಂಪುಗಳ ಕಲ್ಲು ತೂರಾಟದಲ್ಲಿ ತೀವ್ರವಾಗಿ ಗಾಯಗೊಂಡರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ಶಾಂತಿ-ಸುರಕ್ಷತೆ ಕಾಪಾಡಲು ಜಿಲ್ಲಾಡಳಿತವು ಮೂರು ತಾಲೂಕುಗಳಲ್ಲಿ ಮೂರು ದಿನಗಳ ನಿಷೇಧಾಜ್ಞೆ ಜಾರಿಗೊಳಿಸಿದೆ. ಜಿಲ್ಲಾಧಿಕಾರಿಯ ಅಧಿಕೃತ ಆದೇಶ ಪ್ರಕಾರ, ಈ ಕ್ಷಣದಿಂದಲೇ (ನ.13ರ ಸಂಜೆ) ನವೆಂಬರ್ 16ರ ಬೆಳಿಗ್ಗೆ 8 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಕಾಲಾವಧಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗಳ ಸೇರ್ಪಡೆ, ಧರಣೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆಯು ಈ ಪ್ರದೇಶದಲ್ಲಿ ಕಟ್ಟುನಿಟ್ಟು ಭದ್ರತಾ ವ್ಯವಸ್ಥೆಗಳನ್ನು ಜಾರಿಗೊಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ