ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ದಲಿತ ಸಿಎಂ ಕೂಗು ಎಬ್ಬಿಸಿದ ವಾಲ್ಮೀಕಿ ಗುರುಪೀಠ ಪ್ರಸನ್ನಾನಂದ ಸ್ವಾಮೀಜಿ!

Published : Nov 05, 2023, 04:46 PM IST
ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ದಲಿತ ಸಿಎಂ ಕೂಗು ಎಬ್ಬಿಸಿದ ವಾಲ್ಮೀಕಿ ಗುರುಪೀಠ ಪ್ರಸನ್ನಾನಂದ ಸ್ವಾಮೀಜಿ!

ಸಾರಾಂಶ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತಾರಕಕ್ಕೇರಿವಾಗಲೇ 'ದಲಿತ ಸಿಎಂ ಯಾಕಾಗಬಾರದು ಎಂದು ಪ್ರಶ್ನಿಸುವ ಮೂಲಕ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ.

ಬಾಗಲಕೋಟೆ (ನ.5): ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತಾರಕಕ್ಕೇರಿವಾಗಲೇ 'ದಲಿತ ಸಿಎಂ ಯಾಕಾಗಬಾರದು ಎಂದು ಪ್ರಶ್ನಿಸುವ ಮೂಲಕ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ.

ಬಾಗಲಕೋಟೆಯಲ್ಲಿ ನೆಡದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸ್ವಾಮೀಜಿ, ನಾಡಿನ ಸಿಎಂ ಆಗಲು ಸತೀಶ ಜಾರಕಿಹೊಳಿ ಅವರಿಗೆ ಎಲ್ಲ ರೀತಿಯಲ್ಲೂ ಅರ್ಹರಾಗಿದ್ದಾರೆ.
ಅವರ ಬೆನ್ನಿಗೆ ನಾವೆಲ್ಲಾ ನಿಲ್ಲಬೇಕಿದೆ. ರಾಜ್ಯದಲ್ಲಿ ದಲಿತ ಸಿಎಂ ಯಾಕೆ ಆಗಬಾರದು. ದಲಿತರು ಮತ ಬ್ಯಾಂಕ್ ಮಾತ್ರ ಅಗಿರಬೇಕಾ? ಸಿಎಂ ಹುದ್ದೆ ಕೆಲವರ ಸ್ವತ್ತಾ? ಯಾರಾದ್ರೂ ಗುತ್ತಿಗೆ ಪಡೆದುಕೊಂಡಿದ್ದಾರಾ ದಲಿತರು ಸಿಎಂ ಆಗಲಿ ಎನ್ನುವ ಔದಾರ್ಯ ಹೊಂದಿರದಿದ್ದರೆ ಹೇಗೆ? ಎಂದು ಪ್ರಶ್ನಿಸುವ ಮೂಲಕ ಸತೀಶ ಜಾರಕಿಹೊಳಿ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿ ಎನ್ನುವ ಆಶಯ ವ್ಯಕ್ತಪಡಿಸಿದರು.

 

ತಾವು ತಾವೇ ಹೊಡಿದಾಡಿ ಸಾಯಲಿಕ್ಕತ್ಯಾರ ಇನ್ನ ದಲಿತರನ್ನ ಹೆಂಗ ಸಿಎಂ ಮಾಡ್ತಾರ?: ಕಾಂಗ್ರೆಸ್ ವಿರುದ್ಧ ಸಂಸದ ಜಿಗಜಿಣಗಿ ಕಿಡಿ

ಸಚಿವ ಸತೀಶ ಜಾರಕಿಹೊಳಿ ಸಮ್ಮುಖದಲ್ಲೇ ದಲಿತ ಸಿಎಂ ಪ್ರಸ್ತಾಪ ಮಾಡಿದ ಸ್ವಾಮೀಜಿ ಬಾಗಲಕೋಟೆಯ ನವನಗರದ ಕಲಾಭವನದಲ್ಲಿ ನಡೆದ ಜಿಲ್ಲಾ ವಾಲ್ಮೀಕಿ ಜನ ಜಾಗೃತಿ ಸಮಾವೇಶದಲ್ಲಿ ಪ್ರಸ್ತಾಪ ಮಾಡಿರುವ ಸ್ವಾಮಿಜಿ. ಮುಂದಿನ ಎರಡೂವರೆ ವರ್ಷಗಳ ಬಳಿಕ ಕರ್ನಾಟಕ ಸಿಎಂ ಬದಲಾಗಬೇಕು ಎಂಬ ಚರ್ಚೆ ನಡೆಯುತ್ತಿರುವಾಗಲೇ ಇತ್ತ ದಲಿತ ಸಿಎಂ ಕೂಗು ಎದ್ದಿದೆ. ಇತ್ತ ತುಮಕೂರಿನಲ್ಲಿ ಸಚಿವ ರಾಜಣ್ಣ ಸಹ ದಲಿತರು ಸಿಎಂ ಆಗಬೇಕು ಎಂದಿದ್ದಲ್ಲದೆ ಗೃಹ ಸಚಿವ ಪರಮೇಶ್ವರ ಸಿಎಂ ಆಗಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಸಹ ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗಲು ಸಿದ್ದ ಎಂದಿದ್ದಾರೆ. 

 

ದಲಿತ ಸಿಎಂ ಬಗ್ಗೆ ಚರ್ಚೆಯೇ ನಡೆದಿಲ್ಲ: ವಿಶೇಷ ಸಂದರ್ಶನದಲ್ಲಿ ಸಚಿವ ಮಹದೇವಪ್ಪ ಹೇಳಿದ್ದೇನು?

ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ತಾರಕಕ್ಕೇರಿರುವ ಹಿನ್ನೆಲೆ ಸರ್ಕಾರವನ್ನೇ ಪೇಚಿಗೆ ಸಿಲುಕಿಸಿದೆ ಈ ಹಿನ್ನೆಲೆ ನಿನ್ನೆಯಷ್ಟೇ ಕಾಂಗ್ರೆಸ್ ಶಾಸಕ, ಸಚಿವರ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಡಿಸಿಎಂ ಶಿವಕುಮಾರ. ಕರ್ನಾಟಕ ಸಿಎಂ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡದಂತೆ ತಾಕೀತು ಮಾಡಿದ್ದಾರೆ. ಈ ಹಿನ್ನೆಲೆ ಸಭೆ ಬಳಿಕ ಯಾರೂ ಸಹ ಸಿಎಂ ಬದಲಾವಣೆ ಕುರಿತು ಹೇಳಿಕೆ ನೀಡಿರಲಿಲ್ಲ ಆದರೆ ಇದೀಗ ಬಾಗಲಕೋಟೆ ವಾಲ್ಮೀಕಿ ಜಾಗೃತಿ ಸಮಾವೇಶದಲ್ಲಿ ಮತ್ತೆ ದಲಿತ ಸಿಎಂ ಕೂಗು ಎದ್ದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!