ಮಕ್ಕಳಿಗೆ ಹಾಲಿನ ಪುಡಿ ವಿತರಣೆ: ಸಿಎಂಗೆ ಜಾರಕಿಹೊಳಿ ಅಭಿನಂದನೆ

Kannadaprabha News   | Asianet News
Published : Jun 05, 2021, 08:15 AM IST
ಮಕ್ಕಳಿಗೆ ಹಾಲಿನ ಪುಡಿ ವಿತರಣೆ: ಸಿಎಂಗೆ ಜಾರಕಿಹೊಳಿ ಅಭಿನಂದನೆ

ಸಾರಾಂಶ

* ಕೆಎಂಎಫ್‌ ಮನವಿ ಒಪ್ಪಿದ್ದಕ್ಕೆ ಸಿಎಂ ಭೇಟಿ ಮಾಡಿ ಅಭಿನಂದನೆ * 64 ಲಕ್ಷ ಮಕ್ಕಳಿಗೆ 3200 ಟನ್‌ ಹಾಲಿನ ಪುಡಿ ವಿತರಣೆಗೆ ಕ್ರಮ * ರೈತರ ಹಿತ ಕಾಯಲೂ ಸಾಧ್ಯ   

ಬೆಂಗಳೂರು(ಜೂ.05): ಶಾಲಾ ಮಕ್ಕಳ ಮನೆ ಬಾಗಿಲಿಗೆ ಹಾಲಿನ ಪುಡಿ ವಿತರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಟಿಕ ಹಾಲಿನ ಪುಡಿ ವಿತರಿಸಲು ಕೆಎಂಎಫ್‌ ಮನವಿ ಮಾಡಿತ್ತು. ಸರ್ಕಾರ ಇದಕ್ಕೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ಕೋವಿಡ್‌ನಿಂದಾಗಿ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಹಾಲು ನೀಡಲು ಸಾಧ್ಯವಾಗಿರಲಿಲ್ಲ. ಇದನ್ನು ಮನಗಂಡ ಬಾಲಚಂದ್ರ ಜಾರಕಿಹೊಳಿ ಅವರು, ಮುಂದಿನ ಎರಡು ತಿಂಗಳಿಗೆ ಪ್ರತಿ ತಿಂಗಳಿಗೆ ಒಂದು ಮಗುವಿಗೆ ಅರ್ಧ ಕೆಜಿ ಹಾಲಿನ ಪುಡಿ ನೀಡುವುದು ಸೂಕ್ತ. ರೈತರ ಹಿತ ಕಾಯಲೂ ಸಾಧ್ಯವಾಗುತ್ತದೆ ಎಂದು ಮನವಿ ಮಾಡಿದ್ದರು.

ಪ್ರತಿ ಲೀಟರ್‌ ಜೊತೆ 40 ML ಉಚಿತ ಹಾಲು: ಕೆಎಂಎಫ್‌ ಬಂಪರ್‌

ಕೆಎಂಎಫ್‌ ಮನವಿಯಲ್ಲಿ ಏನಿತ್ತು?

ರಾಜ್ಯದಲ್ಲಿ ಒಟ್ಟು 64 ಲಕ್ಷ ಶಾಲಾ ಮಕ್ಕಳಿದ್ದು ಅವರಿಗೆ ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಹಾಲಿನ ಪುಡಿ ನೀಡಿಬೇಕು. ಅರ್ಧ ಕೆಜಿಗೆ 144.37 ರು. ಆಗಲಿದೆ. (ಸರ್ಕಾರದ ದರ 288.75 ರು. ಪ್ರತಿ ಕೆಜಿಗೆ) ಇದಕ್ಕಾಗಿ ರಾಜ್ಯ ಸರ್ಕಾರವು 92.32 ಕೋಟಿ ರು. ಭರಿಸಿದರೆ ಸಾಕು ಮುಂದಿನ 2 ತಿಂಗಳು ಹಾಲು ಉತ್ಪಾದಕರ ನೆರವಿಗೆ ಸರ್ಕಾರ ಧಾವಿಸಿದಂತಾಗುತ್ತದೆ. ಅಲ್ಲದೆ, ಪ್ರತಿನಿತ್ಯ ಮಕ್ಕಳು 1 ಲೋಟ ಹಾಲನ್ನು ಸೇವಿಸಿದಂತಾಗುತ್ತದೆ ಎಂದು ಕೆಎಂಎಫ್‌ ಮನವಿ ಮಾಡಿತ್ತು.

ಸರ್ಕಾರ ಈ ಯೋಜನೆಗೆ ಹೊಸದಾಗಿ ಹಣ ಹೊಂದಿಸಬೇಕಿಲ್ಲ. ಪ್ರಸಕ್ತ ಸಾಲಿನ ಈ ಯೋಜನೆಗೆ 653 ಕೋಟಿ ರು. ನಿಗದಿಯಾಗಿದ್ದು, ಅದನ್ನೇ ಬಳಸಿಕೊಳ್ಳಬಹುದು. ಜತೆಗೆ ಅರ್ಧ ಕೆಜಿ ಕೆನೆಭರಿತ ಹಾಲಿನ ಪುಡಿಯನ್ನು ರಾಜ್ಯದ 64 ಲಕ್ಷ ಮಕ್ಕಳಿಗೆ ನೀಡಿದರೆ ತಿಂಗಳಿಗೆ 3200 ಮೆಟ್ರಿಕ್‌ ಟನ್‌ ಪುಡಿ ನೀಡಿದಂತಾಗುತ್ತದೆ. ಅಂದರೆ 2.62 ಲಕ್ಷ ಲೀ. ಹಾಲನ್ನು ವಿತರಣೆ ಮಾಡಿದಂತಾಗುತ್ತದೆ. ಮಾತ್ರವಲ್ಲ, ಇಷ್ಟೇ ಪ್ರಮಾಣದ ಹಾಲನ್ನು ರೈತರಿಂದ ಖರೀದಿಸಿದಂತಾಗುತ್ತದೆ ಎಂದು ಕೆಎಂಎಫ್‌ ವಿವರಿಸಿತ್ತು.

ಕೊರೋನಾ ಮೊದಲ ಅಲೆಯ ನಡುವೆಯೂ ಕೆಎಂಎಫ್‌ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿತ್ತು. ಕಟ್ಟಡ ಕಾರ್ಮಿಕರು, ನಿರ್ಗತಿಕರಿಗೆ ನಿತ್ಯ 1 ಲೀಟರ್‌ನಂತೆ 88 ಕೋಟಿ ರು. ಮೌಲ್ಯದ 8 ಲಕ್ಷ ಲೀಟರ್‌ ಹಾಲನ್ನು ಉಚಿತವಾಗಿ ವಿತರಿಸಿತ್ತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ