ಕಿಡ್ನಾಪ್ ಮಾಡಿ ₹5 ಕೋಟಿ ಬೇಡಿಕೆ ಇಟ್ಟಿದ್ದವರೇ ವೈದ್ಯನಿಗೆ ₹300 ಕೊಟ್ಟು ಹೋದ್ರು

Published : Jan 27, 2025, 01:01 PM ISTUpdated : Jan 28, 2025, 05:53 PM IST
ಕಿಡ್ನಾಪ್ ಮಾಡಿ ₹5 ಕೋಟಿ ಬೇಡಿಕೆ ಇಟ್ಟಿದ್ದವರೇ ವೈದ್ಯನಿಗೆ ₹300 ಕೊಟ್ಟು ಹೋದ್ರು

ಸಾರಾಂಶ

ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ₹5 ಕೋಟಿ ಬೇಡಿಕೆ ಇಟ್ಟಿದ್ದ ಅಪಹರಣಕಾರರೇ ವೈದ್ಯನನ್ನು ಶನಿವಾರ ಸಂಜೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿ ಬಿಟ್ಟು ₹300 ಕೊಟ್ಟು ತೆರಳಿದ ಘಟನೆ ವರದಿಯಾಗಿದೆ.  

ಬಳ್ಳಾರಿ (ಜ.27): ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ₹5 ಕೋಟಿ ಬೇಡಿಕೆ ಇಟ್ಟಿದ್ದ ಅಪಹರಣಕಾರರೇ ವೈದ್ಯನನ್ನು ಶನಿವಾರ ಸಂಜೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿ ಬಿಟ್ಟು ₹300 ಕೊಟ್ಟು ತೆರಳಿದ ಘಟನೆ ವರದಿಯಾಗಿದೆ.

ನಗರದ ಎಸ್‌ಎನ್‌ಪೇಟೆಯಲ್ಲಿ ಶನಿವಾರ ಬೆಳಿಗ್ಗೆ ವಾಕಿಂಗ್‌ ಮಾಡುತ್ತಿದ್ದ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಪಿ.ಸುನೀಲಕುಮಾರ್‌ ಅವರನ್ನು ಕಾರ್‌ವೊಂದರಲ್ಲಿ ಬಂದ ಆಗಂತುಕರು ಅಪಹರಣ ಮಾಡಿದ್ದರು. ಬಳಿಕ ವೈದ್ಯನ ಸಹೋದರನಿಗೆ ಕರೆ ಮಾಡಿ ₹5 ಕೋಟಿಗೆ ಬೇಡಿಕೆ ಇಟ್ಟು ಹಣ ನೀಡಿದರೆ ಮಾತ್ರ ಬಿಡುವುದಾಗಿ ಬೆದರಿಕೆ ಹಾಕಲಾಗಿತ್ತು. ಹೀಗೆ ಕೋಟ್ಯಂತರ ರುಪಾಯಿಗೆ ಬೇಡಿಕೆ ಇಟ್ಟ ಅಪಹರಣಕಾರರ ಗುಂಪು ವೈದ್ಯನಿಗೆ ವಾಪಸ್‌ ₹300 ಕೊಟ್ಟು, ಬಸ್‌ ಹತ್ತಿ ಮನೆಗೆ ಸೇರುವಂತೆ ತಿಳಿಸಿದ್ದಾರೆ.

ಈ ಕುರಿತು ಎಸ್ಪಿ ಡಾ.ಶೋಭಾರಾಣಿ ಮಾತನಾಡಿ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಜಿಲ್ಲಾ ಪೊಲೀಸ್‌ ಇಲಾಖೆ ಅಲರ್ಟ್‌ ಆಗಿತ್ತು. ನಗರದ ಎಲ್ಲ ಭಾಗಗಳಲ್ಲಿನ ಸಿಸಿ ಕ್ಯಾಮೆರಾ ಪರಿಶೀಲನೆ, ಅಪಹರಣಕಾರರು ಬಳಸಿದ ಕಾರ್‌ ಕುರಿತು ಪರಿಶೀಲನೆ ನಡೆಸಲು ಮುಂದಾಗಿತ್ತು. ಜಿಲ್ಲೆ ಬಿಟ್ಟು ಹೊರ ತೆರಳದಂತೆ ಅಂತರ್‌ ಜಿಲ್ಲಾ, ರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿ ವಾಹನಗಳ ತಪಾಸಣೆ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಅಲ್ಲದೆ, ಒಳ ರಸ್ತೆಗಳಲ್ಲಿ ಬೈಕ್‌ ಮೂಲಕ ನಿರಂತರ ಪೆಟ್ರೊಲಿಂಗ್‌ ಕಾರ್ಯ ಸಹ ನಡೆಸಲಾಗಿತ್ತು.

10ನೇ ಕ್ಲಾಸ್ ಹುಡ್ಗನ ಕಿಡ್ನಾಪ್ ಮಾಡಿ ಲೈಂಗಿಕವಾಗಿ ಬಳಸಿಕೊಂಡ ವಿವಾಹಿತೆ ಅರೆಸ್ಟ್

ಹೀಗಾಗಿ, ಅಪಹರಣಕಾರರಿಗೆ ಬೇರೆ ದಾರಿಯಿಲ್ಲದೇ ವೈದ್ಯನನ್ನು ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿ ಶನಿವಾರ ರಾತ್ರಿ 9ಕ್ಕೆ ಸುರಕ್ಷಿತವಾಗಿ ಬಿಟ್ಟು ತೆರಳಿದ್ದಾರೆ. ಈ ವೇಳೆ ಅಪಹರಣಕಾರರೇ ನಮಗೆ ಹಣ ಬೇಡ, ನೀನೇ ಈ ₹300 ತೆಗೆದುಕೊಂಡು ಬಸ್‌ ಹತ್ತಿ ಮನೆ ಸೇರು ಎಂದು ಹೇಳಿದ್ದಾರೆ. ಬಳಿಕ ವೈದ್ಯ ಸುನೀಲಕುಮಾರ್‌ ಸ್ಥಳೀಯ ಮೊಬೈಲ್‌ನಿಂದ ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ವೈದ್ಯನ ಮೊಬೈಲ್‌ ನಾಪತ್ತೆಯಾಗಿದೆ. ವೈದ್ಯನ ಅಪಹರಣ ಮಾಡಿದವರ ಹುಡುಕಾಟ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್