
ಬೆಂಗಳೂರು (ಜೂ.25): ಚುನಾವಣೆ ಮುಗಿದ ಬೆನ್ನಲ್ಲಿಯೇ ಒಂದೊಂದಾಗಿ ಎಲ್ಲರದ ದರದಲ್ಲೂ ಏರಿಕೆ ಆಗುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ 3 ರೂಪಾಯಿ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಈಗ ದಿನಬಳಕೆಯ ಮತ್ತೊಂದು ಅಗತ್ಯವಸ್ತುವಾದ ಹಾಲಿನ ದರದಲ್ಲೂ ಏರಿಕೆ ಮಾಡಿದೆ. ಕರ್ನಾಟಕ ಹಾಲು ಮಹಾಮಂಡಳ ಹಾಲಿನ ಬೆಲೆ ಮೇಲೆ 2 ರೂಪಾಯಿ ಏರಿಕೆ ಮಾಡಿ ಪ್ರಕಟಣೆ ಹೊರಡಿಸಿದ್ದು, ನಾಳೆಯಿಂದಲೇ ಈ ದರ ಜಾರಿಯಾಗಲಿದೆ. ಇದರ ಬೆನ್ನಲ್ಲಿಯೇ ಹೋಟೆಲ್ ಉದ್ಯಮಿಗಳು ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಶೀಘ್ರದಲ್ಲಿಯೇ ಕಾಫಿ, ಟೀ, ತಿಂಡಿ ಬೆಲೆಯ ಏರಿಕೆಯ ಮೇಲೂ ಇದು ಪರಿಣಾಮ ಬೀರಲಿದೆ ಎಂದಿದ್ದಾರೆ.
ಹಾಲಿನ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮಿಗಳಿಗೆ ನಷ್ಟವಾಗಲಿದೆ. ನಂದಿನಿ ಹಾಲನ್ನು ಅತೀ ಹೆಚ್ಚು ಬಳಕೆ ಮಾಡೋದು ಹೋಟೆಲ್ ಉದ್ಯಮಿಗಳು. ಈಗಾಗಲೇ ಸಾಕಷ್ಟು ಬೆಲೆ ಏರಿಕೆಯಿಂದ ಹೋಟೆಲ್ ನಡೆಸೋದೇ ಕಷ್ಟವಾಗಿದೆ. ಕಳೆದವಾರ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿದೆ. ಇದೀಗ ಹಾಲಿನ ಬೆಲೆ ಏರಿಕೆ ಹೋಟೆಲ್ ಉದ್ಯಮಕ್ಕೆ ನುಂಗಲಾರದ ತುತ್ತಾಗಿದೆ ನಾವು ಹೋಟೆಲ್ ಗಳಲ್ಲಿ ಕಾಫಿ,ಟೀ ತಿಂಡಿ ಬೆಲೆ ಏರಿಕೆ ಬಗ್ಗೆ ಸಭೆ ಕರೆದು ಚರ್ಚಿಸಿ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಬೆಂಗಳೂರು ಹೋಟೆಲ್ ಮಾಲಿಕರ ಸಂಘಟನೆ ಅಧ್ಯಕ್ಷ ಪಿಸಿರಾವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ