
ಬೆಂಗಳೂರು(ನ.03): ಬೆಂಗಳೂರಿನ ಸುಮ್ಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ ಕಾಣಿಸಕೊಂಡ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಇದೀಗ ಮೇಲ್ಸೇತುವೆಗಳ ಅಧ್ಯಯನ ನಡೆಸಿ, ಪರಿಶೀಲನೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಬಿಬಿಎಂಬಿ ಆಯುಕ್ತರು ಮತ್ತು ಮೇಯರ್ ರಾತ್ರಿ ವೇಳೆ ತಪಾಸಣೆ ನಡೆಸುವುದಕ್ಕೆ ತೀರ್ಮಾನಿಸಿದ್ದಾರೆ.
ನಗರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಈಗಾಗಲೇ ಶೇ.10 ರಷ್ಟುರಸ್ತೆ ಗುಂಡಿಗಳನ್ನು ಭರ್ತಿ ಮಾಡಲಾಗಿದೆ. ರಸ್ತೆ ಗುಂಡಿ ಮುಚ್ಚುವುದಕ್ಕೆ ನೀಡಲಾಗಿರುವ ಗಡುವಿಗೂ ಮುನ್ನವೇ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದಿದ್ದಾರೆ.
ಸುಮ್ಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ: 10 ದಿನ ಸಂಚಾರ ನಿಷೇಧ..!
ಅಧಿಕಾರಿಗಳು ರಸ್ತೆ ಗುಂಡಿ ಭರ್ತಿಯ ಬಗ್ಗೆ ಮಾಹಿತಿ ನೀಡಿರುವ ರಸ್ತೆಗಳಲ್ಲಿ ರಾತ್ರಿ ವೇಳೆಯಲ್ಲಿ ಆಯುಕ್ತರೊಂದಿಗೆ ತಪಾಸಣೆ ನಡೆಸಲಾಗುವುದು. ಭಾನುವಾರ ರಾತ್ರಿಯಿಂದ ತಪಾಸಣೆ ಕಾರ್ಯ ಆರಂಭಿಸಲಾಗುವುದು ಎಂದು ಮೇಯರ್ ಗೌತಮ್ ಕುಮಾರ್ ಶನಿವಾರ ಹೇಳಿದ್ದಾರೆ.
ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿರುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬ್ರಿಡ್ಜ್ ನಲ್ಲಿ ಭಾರೀ ಗುಂಡಿ : ಸಂಚಾರ ಮಾರ್ಗ ಬದಲಾಗಿ ಕಿ.ಮೀವರೆಗೂ ಟ್ರಾಫಿಕ್ ಜಾಮ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ