ಮೈಸೂರು ಅರಮನೆ ಜಮೀನು ವಿವಾದ: ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

Published : Feb 15, 2025, 06:00 AM ISTUpdated : Apr 15, 2025, 02:55 PM IST
ಮೈಸೂರು ಅರಮನೆ ಜಮೀನು ವಿವಾದ: ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಸಾರಾಂಶ

ರಸ್ತೆ ನಿರ್ಮಾಣಕ್ಕೆ ಮೈಸೂರು ಅರಮನೆ ಜಾಗ ಬಳಸಲು ಉದ್ದೇಶಿಸಿದ್ದ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಟಿಡಿಆರ್‌ ಪಾವತಿಸುವಂತೆ ಸೂಚಿಸಿದೆ. ಈ ಹಿಂದಿನ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ನವದೆಹಲಿ (ಫೆ.15): ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್‌ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ. ಈ ಕುರಿತ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಪ್ರೀಂಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

‘ನಾವು ಈಗಾಗಲೇ ಈ ಕುರಿತು ಆದೇಶ ಹೊರಡಿಸಿದ್ದೇವೆ. ಇದನ್ನು ನಿಮ್ಮ ಅಧಿಕಾರಿಗಳು ಪಾಲಿಸಲೇಬೇಕು. ಇಲ್ಲದೇ ಹೋದಲ್ಲಿ ಅವರು ಸಂಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ’ ಎಂದು ಸುಪ್ರೀಂಕೋರ್ಟ್‌ ಎಚ್ಚರಿಸಿದೆ. ಇದರಿಂದಾಗಿ ಸಹಸ್ರಾರು ಕೋಟಿ ರು. ಮೊತ್ತದ ಟಿಡಿಆರ್‌ ಪರಿಹಾರ ಪಾವತಿಯಿಂದ ತಪ್ಪಿಸಿಕೊಳ್ಳಲು ಸುಗ್ರೀವಾಜ್ಞೆ ಅಸ್ತ್ರದ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ಇದನ್ನೂ ಓದಿ: ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಹೆಚ್‌ಡಿಕೆ ಗಂಭೀರ ಆರೋಪ

ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ನ್ಯಾ.ಎಂ.ಎಂ.ಸುಂದರೇಶ್‌ ಮತ್ತು ನ್ಯಾ.ಅರವಿಂದ್‌ ಕುಮಾರ್‌ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ವಾದ ಮಂಡಿಸಿದ ಕರ್ನಾಟಕ ಸರ್ಕಾರದ ಪರ ವಕೀಲರಾದ ಕಪಿಲ್‌ ಸಿಬಲ್‌ ಮತ್ತು ಅಡ್ವೋಕೇಟ್‌ ಜನರಲ್‌ ಶಶಿಕಿರಣ್ ಶೆಟ್ಟಿ, ‘ಸದ್ಯ ವಿವಾದಲ್ಲಿರುವ ಜಾಗವನ್ನು ಬಳಸದೆ ಇರಲು ಸರ್ಕಾರ ನಿರ್ಧರಿಸಿದೆ. ಭೂಮಿ ವಶಪಡಿಸಿಕೊಳ್ಳುವ ನಿರ್ಧಾರದಿಂದಲೂ ಹಿಂದೆ ಸರಿದಿದ್ದೇವೆ. ಈ ಕುರಿತಂತೆ ನಾವು ಇತ್ತೀಚೆಗೆ ಹೊರಡಿಸಿದ ಸುಗ್ರೀವಾಜ್ಞೆ ಜಾರಿಯಲ್ಲಿ ಇರುವವರೆಗೂ ಅಥವಾ ಅದನ್ನು ರದ್ದುಪಡಿಸುವವರೆಗೂ ನಾವು ಭೂಮಿಯನ್ನು ಬಳಸಿಕೊಳ್ಳಲು ಹೋಗುವುದಿಲ್ಲ’ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಆದರೆ ಇದಕ್ಕೆ ತಿರುಗೇಟು ನೀಡಿದ ಮೈಸೂರು ಅರಮನೆ ಪರ ವಕೀಲರು, ‘ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಸುಪ್ರೀಂಕೋರ್ಟ್‌ನ ಹಿಂದಿನ ಆದೇಶ ಪಾಲಿಸಲು 6 ವಾರ ಸಮಯ ನೀಡಿದ ಅವಧಿಯಲ್ಲೇ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ವಾದಿಸಿದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ನ್ಯಾಯಪೀಠ, ಟಿಡಿಆರ್‌ ಹಸ್ತಾಂತರ ಕುರಿತ ನಮ್ಮ ಹಿಂದಿನ ಆದೇಶ ಮರುಪರಿಶೀಲನೆ ಪ್ರಶ್ನೆಯೇ ಇಲ್ಲ. ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿ ಅರ್ಜಿ ವಿಚಾರಣೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!