ಬೆಂಗಳೂರಲ್ಲಿ ಸರಗಳ್ಳತನ ಮಾಡುತ್ತಿದ್ದ ಮಂಗಳೂರಿಗರು ಅರೆಸ್ಟ್!

Published : Dec 08, 2018, 02:03 PM IST
ಬೆಂಗಳೂರಲ್ಲಿ ಸರಗಳ್ಳತನ ಮಾಡುತ್ತಿದ್ದ ಮಂಗಳೂರಿಗರು ಅರೆಸ್ಟ್!

ಸಾರಾಂಶ

ಬೆಂಗಳೂರಿನಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಮಂಗಳೂರು ಮೂಲದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು[ಡಿ.08]: ಮಂಗಳೂರಿನಿಂದ ಬಂದು ಬೆಂಗಳೂರಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸರ ಅತಿಥಿಯಾಗಿದ್ದಾರೆ

ಬೆಂಗಳೂರಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಮಂಗಳೂರು ಮೂಲದ ಮೊಹಮ್ಮದ್ ರಫೀಕ್, ತೌಸಿಫ್ ಸಾಧಿಕ್ ರನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳು ಮಲ್ಲೇಶ್ವರಂ ರಿಜಾಯ್ಸ್ ಹೊಟೇಲ್ ನಲ್ಲಿ ಸಂಬಂಧಿಕರ ಮದುವೆಗೆಂದು ಬಂದಿದ್ದ ನಿರ್ಮಲಾ ಎಂಬ ಮಹಿಳೆ ಲಿಪ್ಟ್ ಗಾಗಿ ಕಾಯುತ್ತಿದ್ದ ವೇಳೆ  ಸರ ಕಿತ್ತಿದ್ದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

ಘಟನೆಯ ಬಳಿಕ ಮಹಿಳೆಯು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾರ್ಯ ಪ್ರವೃತ್ತರಾದ ಪೊಲೀಸರು ಹೊಟೇಲ್ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಇಬ್ಬರು ಸರಗಳ್ಳರನ್ನು ಬಂಧಿಸಿದ್ದಾರೆ. 

ಆರೋಪಿಗಳ ವಿರುದ್ದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ 25 ಸರಗಳ್ಳತನ ಪ್ರಕರಣ ಹಾಗೂ ಮೂರು ದರೋಡೆ ಪ್ರಕರಣ ದಾಖಲಾಗಿರುವುದೂ ಬಯಲಾಗಿದೆ. ಸದ್ಯ ಬಂಧಿತರಿಂದ ಮೂರುವರೆ ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!