ಮಗನ ಸಾಲ ಬಾಕಿ: ಗೃಹಲಕ್ಷ್ಮಿ ಹಣ ಕೊಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್! ಇಲ್ಲಿ ಯಾರದು ತಪ್ಪು ನೀವೇ ಹೇಳಿ

Published : Mar 22, 2025, 09:53 AM ISTUpdated : Mar 22, 2025, 09:54 AM IST
ಮಗನ ಸಾಲ ಬಾಕಿ: ಗೃಹಲಕ್ಷ್ಮಿ ಹಣ ಕೊಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್! ಇಲ್ಲಿ ಯಾರದು ತಪ್ಪು ನೀವೇ ಹೇಳಿ

ಸಾರಾಂಶ

ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರಿನ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ ವಿಚಾರ ಕೊಳ್ನಾಡು ಗ್ರಾಮಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ.‌

ಬಂಟ್ವಾಳ (ಮಾ.22): ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರಿನ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ ವಿಚಾರ ಕೊಳ್ನಾಡು ಗ್ರಾಮಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ.‌

ಕೊಳ್ನಾಡು ಗ್ರಾಮಸಭೆ ಆರಂಭವಾದ ಕೆಲಹೊತ್ತಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಾಲೆತ್ತೂರು ಶಾಖೆಯ ಮ್ಯಾನೇಜರ್ ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಗ್ರಾಮಸ್ಥರಿಗೆ ಮಾತನಾಡಲು ಅವಕಾಶ ಕೊಟ್ಟರು.

ಇದನ್ನೂ ಓದಿ: ಮಹಿಳೆಯರಿಗೆ 2,000 ಕೊಡುವಂತೆ, ಗಂಡಸರಿಗೆ ವಾರಕ್ಕೆ 2 ಬಾಟಲ್ ಎಣ್ಣೆ ಕೊಡಿ; ಶಾಸಕ ಕೃಷ್ಣಪ್ಪ ಬೇಡಿಕೆ!

ಕೊಳ್ನಾಡು ಗ್ರಾಮದ ಕಲ್ಲಮಜಲು ನಿವಾಸಿ ದೃಷ್ಟಿ ಹೀನ ಮಹಿಳೆ ನೆಬಿಸ ಮಹಮ್ಮದ್ ಅವರ ಪುತ್ರ ಈ ಶಾಖೆಯಿಂದ ವೈಯಕ್ತಿಕ ಸಾಲ ಪಡೆದಿದ್ದರು. ಆರ್ಥಿಕ ಸಂಕಷ್ಟದಿಂದಾಗಿ ಸಾಲದ ಕಂತು ವಿಳಂಬವಾಗಿತ್ತು. ತಾಯಿ ನೆಬಿಸ ತನ್ನ ಖಾತೆಗೆ ಜಮಾ ಆಗಿರುವ ಗೃಹಲಕ್ಷ್ಮಿ ಹಣ ಮತ್ತು ದೃಷ್ಟಿ ಹೀನ ಬಗ್ಗೆ ಸರ್ಕಾರದಿಂದ ಸಿಗುವ ಪಿಂಚಣಿ ಹಣ ನಗದೀಕರಿಸಲು ಮೂರು ಬಾರಿ ಹೋಗಿದ್ದಾರೆ. ಪುತ್ರನ ಸಾಲ ಬಾಕಿ ಇರುವ ಕಾರಣ ನಿಮ್ಮ ಖಾತೆಯಿಂದ ಹಣ ನಗದೀಕರಿಸಲು ಆಗುವುದಿಲ್ಲ ಎಂಬ ಕಾರಣ ಹೇಳಿದ ಮ್ಯಾನೇಜರ್ ಮಹಿಳೆಯನ್ನು ಹಿಂದಕ್ಕೆ ಕಳಿಸಿದ್ದಾರೆ.

ಇದನ್ನೂ ಓಇ:

ಗ್ರಾಮ ಸಭೆಯಲ್ಲಿ ಹಾಜರಿದ್ದ ನೆಬಿಸ ಈ ವಿಚಾರವನ್ನು ಗ್ರಾಮಸ್ಥರ ಮೂಲಕ ಸಭೆಯಲ್ಲಿ ತಿಳಿಸಿದರು. ಅಲ್ಲಿವರೆಗೆ ಹಾರಿಕೆಯ ಉತ್ತರ ನೀಡುತ್ತಿದ್ದ ಬ್ಯಾಂಕ್ ಅಧಿಕಾರಿ ಸ್ವತಃ ನೊಂದ ಮಹಿಳೆಯೇ ಎದ್ದು ನಿಂತು ಕಣ್ಣೀರಿಟ್ಟಾಗ ಸಿಕ್ಕಿಬಿದ್ದಂತಾಗಿದೆ. ಅರ್ಧ ಗಂಟೆ ಕಾಲ ಬ್ಯಾಂಕ್ ಅಧಿಕಾರಿಯನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದು ತರಾಟೆಗೆ ತೆಗೆದುಕೊಂಡರು. ಕೊನೆಗೆ ವಿಧಿಯಿಲ್ಲದೇ ತನ್ನ ತಪ್ಪನ್ನು ಒಪ್ಪಿಕೊಂಡ ಮ್ಯಾನೇಜರ್ ಸಭೆಯಿಂದಲೇ ಹೊರನಡೆದು ಮಹಿಳೆಯನ್ನು ಬ್ಯಾಂಕಿಗೆ ಬರಮಾಡಿ ಖಾತೆಯಲ್ಲಿದ್ದ 8,500 ರು. ನಗದು ಗೃಹಲಕ್ಷ್ಮಿ ಹಣ ನೀಡಿದ್ದಾರೆ. ಹಣ ಪಡೆದು ಬಂದ ಖಾತೆದಾರ ನೆಬಿಸ ಅವರು ಗ್ರಾಮಸಭೆಗೆ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮೀ ಹಣ 4 ಸಾವಿರಕ್ಕೆ ಏರಿಕೆ ಮಾಡುತ್ತೇವೆ ಎಂದ ಶಾಸಕ ಕುಣಿಗಲ್ ರಂಗನಾಥ್‌!

ಸಾಲೆತ್ತೂರು ಮೂಲಕ ಬಾಕ್ಸೈಟ್ ಸಾಗಾಟದ ಭಾರಿ ಸರಕು ವಾಹನಗಳು ನಿರ್ಲಕ್ಷ್ಯದಿಂದ ಸಂಚರಿಸುತ್ತಾ ಇತರ ವಾಹನಗಳ ಸಂಚಾರಕ್ಕೆ ತಡೆಯುಂಟಾಗಿದೆ. ಗ್ರಾಮೀಣ ರಸ್ತೆಯಲ್ಲಿ 12,14,16 ಚಕ್ರಗಳ ಭಾರಿ ಸರಕು ಲಾರಿಗಳ ಸಂಚಾರವನ್ನು ನಿಷೇಧಿಸಿದ್ದರೂ ಲಾರಿಗಳ ಅಟ್ಟಹಾಸ ಮಿತಿ ಮೀರಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪಂಚಾಯಿತಿ ನಿರ್ಣಯದ ಮೂಲಕ ಜಿಲ್ಲಾಧಿಕಾರಿ, ಗಣಿ ನಿರ್ದೇಶಕರಿಗೆ ಹಾಗೂ ಸಾರಿಗೆ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡುತ್ತೇವೆ ಎಂದು ಪಂಚಾಯಿತಿ ಅಧ್ಯಕ್ಷ ಅಶ್ರಫ್ ಸಾಲೆತ್ತೂರು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರೇಣುಕಾ ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!