ನಂಜನಗೂಡು: ಬಂಕಹಳ್ಳಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಭಗ್ನ! ಗ್ರಾಮಸ್ಥರು ಆಕ್ರೋಶ

Kannadaprabha News, Ravi Janekal |   | Kannada Prabha
Published : Oct 10, 2025, 06:04 AM IST
Bankahalli village land dispute

ಸಾರಾಂಶ

ನಂಜನಗೂಡು ತಾಲೂಕಿನ ಬಂಕಹಳ್ಳಿ ಗ್ರಾಮದ ಜಮೀನಿನಲ್ಲಿದ್ದ ಉದ್ಭವ ಶಿವಲಿಂಗ ಮತ್ತು ನಂದಿ ವಿಗ್ರಹಗಳನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಈ ಜಮೀನು ಅನ್ಯ ಕೋಮಿನ ವ್ಯಕ್ತಿಗೆ ಸೇರಿದ್ದು, ಪೂಜೆಗೆ ಅಡ್ಡಿಪಡಿಸುತ್ತಿರುವುದೇ ವಿವಾದಕ್ಕೆ ಕಾರಣವಾಗಿದ್ದು, ಗ್ರಾಮಸ್ಥರು ದೇವಾಲಯ ನಿರ್ಮಾಣಕ್ಕೆ ಆಗ್ರಹ.

ನಂಜನಗೂಡು (ಅ.10): ತಾಲೂಕಿನ ಬಂಕಹಳ್ಳಿ ಗ್ರಾಮದಲ್ಲಿನ ಜಮೀನಿನಲ್ಲಿದ್ದ ಉದ್ಭವ ಶಿವಲಿಂಗ ಹಾಗೂ ನಂದಿಬಸವ ಮೂರ್ತಿಗಳನ್ನು ಕಿಡಿಗೇಡಿಗಳು ಭಗ್ನಗೊಳಿಸಿ, ಗ್ರಾಮಸ್ಥರು ಪೂಜಾ ಕೈಂಕರ್ಯಗಳನ್ನು ನಡೆಸದಂತೆ ದಿಗ್ಬಂಧನ ವಿಧಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಗ್ರಾಮದ ಹೊರವಲಯದ ಜಮೀನಿನಲ್ಲಿರುವ ಉದ್ಭವ ಶಿವಲಿಂಗ ಹಾಗೂ ನಂದಿ ಬಸವ ವಿಗ್ರಹಗಳಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವುದು ವಾಡಿಕೆಯಾಗಿತ್ತು.

1982-83 ರ ಸಾಲಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಅನ್ಯ ಕೋಮಿನ ವ್ಯಕ್ತಿಗೆ ನಿಯಮಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ. ಈಗ್ಗೆ ಎರಡು ತಿಂಗಳಿನಿಂದ ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಪೂಜಾ ಕೈಂಕರ್ಯಗಳನ್ನು ನಡೆಸದಂತೆ ಅನ್ಯ ಕೋಮಿನ ವ್ಯಕ್ತಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಇದನ್ನೂ ಓದಿ: ಮೈಸೂರು: ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿ ಶವ ಪತ್ತೆ! ರೇಪ್ ಅಂಡ್ ಮರ್ಡರ್ ಶಂಕೆ!

ಬುಧವಾರ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಬಿ. ಹರ್ಷವರ್ಧನ್ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಲಿಂಗದ ಮೇಲೆ ಪೆಟ್ಟು ಬಿದ್ದಿರುವ ಗುರುತುಗಳಿದ್ದು, ಪಕ್ಕದಲ್ಲಿ ನಂದಿ ಬಸವನ ತಲೆ ಭಾಗವು ಮುರಿದು ಬಿದ್ದಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ದಾಖಲಾತಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ಸ್ಥಳದಲ್ಲಿ ದೇವಾಲಯ ಇತ್ತು ಎಂಬುದಕ್ಕೆ ಕುರುಹು ಇದೆ. ಹಾಗಾಗಿ ಇದೇ ಸ್ಥಳದಲ್ಲಿ ದೇವಾಲಯವನ್ನು ನಿರ್ಮಾಣ ಮಾಡಬೇಕಾಗಿದೆ, ಬಂಕಹಳ್ಳಿಯ ಗ್ರಾಮಸ್ಥರು ಶಿವಲಿಂಗವನ್ನು ಭಗ್ನಗೊಳಿಸಿರುವ ಕುರಿತು ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸಂಬಂಧಪಟ್ಟ ಕಂದಾಯ ಇಲಾಖೆ ಮತ್ತು ಪುರಾತತ್ವ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣಕ್ಕೆ ತೆರೆ ಎಳೆಯ ಬೇಕಿದೆ, ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!