
ವಿಧಾನ ಪರಿಷತ್ (ಸೆ.22): ವಿಧವಾ ವೇತನಾ, ವೃದ್ಧಾಪ್ಯ ವೇತನ, ಪಿಂಚಣಿಯ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುವ ಬ್ಯಾಂಕ್ಗಳ ಕ್ರಮ ಅಪರಾಧ. ಈ ರೀತಿ ಮಾಡುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮಳೆಯಿಂದ ರಾಜ್ಯದಲ್ಲಿ ಆಗಿರುವ ಅನಾಹುತದ ಬಗ್ಗೆ ವಿಧಾನ ಪರಿಷತ್ ನಲ್ಲಿ ನಿಯಮ 68ರಡಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕನ್ನಡಪ್ರಭದಲ್ಲಿ ಪ್ರಕಟವಾಗಿದ್ದ ವಿಧವಾ ವೇತನವೂ ರೈತರ ಸಾಲದ ಖಾತೆಗೆ ಜಮೆ ಎಂಬ ವರದಿಯನ್ನು ಪ್ರಸ್ತಾಪಿಸಿ ಮಾತನಾಡಿದ ಕಾಂಗ್ರೆಸ್ ಸದಸ್ಯ ಅರವಿಂದ ಕುಮಾರ್ ಅರಳಿ, ರೈತರ ಖಾತೆಗೆ ಬೀಳುವ ಪರಿಹಾರ ಹಣ, ವಿಧವಾ, ವೃದ್ಧಾಪ್ಯ ವೇತನ, ಪಿಎಂ ಮತ್ತು ಸಿಎಂ ಕಿಸಾನ್ ಸಮ್ಮಾನ್ ನ ಹಣ ಮುಂತಾದವನ್ನು ರೈತರ ಸಾಲದ ಖಾತೆಗೆ ಜಮೆ ಮಾಡಲಾಗುತ್ತಿದೆ. ಆದ್ದರಿಂದ ಸರ್ಕಾರ ತಕ್ಷಣವೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
' ಕಾಂಗ್ರೆಸ್ ವಿಷಯದಲ್ಲಿ ಬಿಜೆಪಿ ಮುಖಂಡ ತಲೆ ಹಾಕುವ ಚಾಳಿ ಬಿಡಲಿ' .
ಅರಳಿ ಅವರ ಪ್ರಸ್ತಾಪಕ್ಕೆ ಸ್ಪಂದಿಸಿದ ಅಶೋಕ್, ‘ವಿಧವಾ ವೇತನ, ವೃದ್ಧಾಪ್ಯ ವೇತನದ ಹಣವನ್ನು ಸಾಲದ ಖಾತೆಗೆ ಜಮೆ ಮಾಡುವುದು ಅಪರಾಧ. ಪಿಂಚಣಿಯನ್ನು ಸಾಲದ ಖಾತೆಗೆ ಹಾಕುವಂತೆ ಇಲ್ಲ. ಈ ರೀತಿ ಆಗಿದ್ದರೆ ನಾವು ಕ್ರಮ ಕೈಗೊಳ್ಳುತ್ತೇವೆ. ನೀವು ನನಗೆ ಮಾಹಿತಿಯನ್ನು ನೀಡಿ. ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಆಶೋಕ್ ಸದನಕ್ಕೆ ತಿಳಿಸಿದರು.
ಅರಳಿ ಅವರು ‘ಯಾದಗಿರಿ ಜಿಲ್ಲೆಯಲ್ಲಿ ಪಿಎಂ ಮತ್ತು ಸಿಎಂ ಕಿಸಾನ್ ಸಮ್ಮಾನ್ ನಡಿ ಬರುವ ಹಣ ರೈತರ ಖಾತೆಗೆ ನೀಡುವ ಹಣ ಫಲಾನುಭವಿ ಖಾತೆಗೆ ಹೋಗದೆ ಸಾಲದ ಖಾತೆಗೆ ಹೋಗುತ್ತಿದೆ. ಈ ರೀತಿ ಆಗಬಾರದು’ ಎಂದು ಸರ್ಕಾರದ ಗಮನಕ್ಕೆ ತಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ