ಕೆಪಿಸಿಸಿ ಕಚೇರಿ ಮುಂದೆ ಅನಧಿಕೃತ ಬ್ಯಾನರ್; ಅಧ್ಯಕ್ಷಗೆ .50 ಸಾವಿರ ದಂಡ

Published : Aug 22, 2023, 11:23 AM IST
ಕೆಪಿಸಿಸಿ ಕಚೇರಿ ಮುಂದೆ ಅನಧಿಕೃತ ಬ್ಯಾನರ್;  ಅಧ್ಯಕ್ಷಗೆ .50 ಸಾವಿರ ದಂಡ

ಸಾರಾಂಶ

ನಗರದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್‌ ಅಳವಡಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಬಿಬಿಎಂಪಿಯು .50 ಸಾವಿರ ದಂಡ ವಿಧಿಸಿದೆ.

ಬೆಂಗಳೂರು (ಆ.22) :  ನಗರದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್‌ ಅಳವಡಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಬಿಬಿಎಂಪಿಯು .50 ಸಾವಿರ ದಂಡ ವಿಧಿಸಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಗರದಲ್ಲಿ ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿದೆ. ವಸಂತನಗರ ವಾರ್ಡ್‌ ವ್ಯಾಪ್ತಿಯ ಮಿಲ್ಲರ್‌ ಟ್ಯಾಂಕ್‌ ಬೆಡ್‌ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ(KPCC office)ಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳು ಮಾಜಿ ಪ್ರಧಾನಿ ದಿವಂಗತ ರಾಜೀವ್‌ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್‌ ಕಚೇರಿಯ ಮುಂಭಾಗದಲ್ಲಿ ಬ್ಯಾನರ್‌ ಅಳವಡಿಸಿದ್ದರು.

ಬ್ಯಾನರ್‌ ಅಳವಡಿಗೆಗೆ ಬಿಬಿಎಂಪಿಯಿಂದ ಪರವಾನಗಿ ಪಡೆದಿರಲಿಲ್ಲ. ಹೀಗಾಗಿ, ಬಿಬಿಎಂಪಿಯ ವಸಂತ ನಗರ ವಾರ್ಡ್‌ನ ಸಹಾಯಕ ಕಂದಾಯ ಅಧಿಕಾರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರಿಗೆ .50 ಸಾವಿರ ದಂಡ ವಿಧಿಸಿ, ಮುಖ್ಯ ಆಯುಕ್ತರ ಖಾತೆಗೆ ದಂಡ ಮೊತ್ತವನ್ನು ಪಾವತಿಸುವಂತೆ ಸೂಚಿಸಿದ್ದಾರೆ.

Ghar wapsi: ಕಾಂಗ್ರೆಸ್‌ಗೆ ನೂರಾರು ಬಿಜೆಪಿ ಮುಖಂಡರು ಕಾರ‍್ಯಕರ್ತರ ಸೇರ್ಪಡೆ, ಎಸ್‌ಟಿಎಸ್, ಹೆಬ್ಬಾರ್ ಸೇರುವುದು ನಿಚ್ಚಳ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Karnataka News Live: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್