ದಸರಾ ಉದ್ಘಾಟನಾ ವಿವಾದ: ಬಾನು ಬೆನ್ನಿಗೆ ನಿಂತ ರಾಜ್ಯದ ಲೇಖಕಿಯರು, ನಾಳೆ ಮಹತ್ವದ ಸುದ್ದಿಗೋಷ್ಠಿ

Published : Sep 10, 2025, 12:59 PM IST
Mysuru dasara 2025 banu mustaq row

ಸಾರಾಂಶ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿವಾದಕ್ಕೆ ಪ್ರತಿಕ್ರಿಯೆಯಾಗಿ, ಪ್ರಮುಖ ಲೇಖಕಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಆಯ್ಕೆಯ ಸಮರ್ಥನೆ, ಬಾನು ಅವರ ಸಾಹಿತ್ಯ ಕೊಡುಗೆ ಮತ್ತು ಸಾಮಾಜಿಕ ಹೋರಾಟದ ಬಗ್ಗೆ ವಿವರಿಸಲಿದ್ದಾರೆ.

ಬೆಂಗಳೂರು (ಸೆ.10): ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಯಾಗಿರುವುದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಕೋರ್ಟ್ ಮೊರೆ ಹೋಗಿದ್ದು, ವಿವಾದ ತಾರಕಕ್ಕೇರಿದೆ. ಆದರೆ, ಬಾನು ಮುಷ್ತಾಕ್‌ಗೆ ಬೆಂಬಲವಾಗಿ ಕನ್ನಡ ಸಾಹಿತ್ಯ ಮತ್ತು ಹೋರಾಟದ ವಲಯದ ಪ್ರಮುಖ ಲೇಖಕಿಯರು ಒಗ್ಗಟ್ಟಿನಿಂದ ನಿಂತಿದ್ದಾರೆ. ನಾಳೆ ಬೆಳಿಗ್ಗೆ 12:30ಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಈ ಲೇಖಕಿಯರು ಸುದ್ದಿಗೋಷ್ಠಿ ಆಯೋಜಿಸಿದ್ದು, ಬಾನು ಮುಷ್ತಾಕ್ ಆಯ್ಕೆಯನ್ನು ಸಮರ್ಥಿಸಿಕೊಳ್ಳಲಿದ್ದಾರೆ.

ಈ ಗೋಷ್ಠಿಯಲ್ಲಿ ಡಾ ವಸುಂಧರಾ ಭೂಪತಿ, ಡಾ ಸುನಂದಮ್ಮ, ಡಾ ಪೂರ್ಣಿಮಾ, ಅಕ್ಕೈ ಪದ್ಮಶಾಲಿ ಮತ್ತು ಡಾ ಎನ್ ಗಾಯತ್ರಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಬಾನು ಮುಷ್ತಾಕ್‌ರ ಕೊಡುಗೆ, ಸಾಮಾಜಿಕ ಹೋರಾಟದಲ್ಲಿ ಅವರ ಪಾತ್ರ ಮತ್ತು ದಸರಾ ಉದ್ಘಾಟನೆಗೆ ಅವರ ಆಯ್ಕೆಯ ಸಮಂಜಸತೆಯನ್ನು ಈ ಲೇಖಕಿಯರು ತಿಳಿಸಲಿದ್ದಾರೆ.

ಬಾನು ಮುಷ್ತಾಕ್‌ರ ಆಯ್ಕೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಗೌರವವನ್ನು ಎತ್ತಿಹಿಡಿಯುವ ಕ್ರಮವಾಗಿದೆ. ಇದನ್ನು ವಿರೋಧಿಸುವುದು ಅನಗತ್ಯ ವಿವಾದ ಸೃಷ್ಟಿಸುವ ಯತ್ನವಷ್ಟೇ ಎಂದು ಲೇಖಕಿಯರು ಹೇಳಿದ್ದಾರೆ ಸದ್ಯ ಈ ವಿವಾದದಿಂದ ದಸರಾ ಉದ್ಘಾಟನೆ ಕಾರ್ಯಕ್ರಮದ ಮೇಲೆ ಯಾವುದೇ ಪರಿಣಾಮ ಬೀರದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನಾಳೆ ನಡೆಯುವ ಲೇಖಕಿಯರ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌