
ಬೆಂಗಳೂರು(ಮೇ.25): ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆಯಿಂದಾಗಿ ಜೂನ್ ಮೊದಲ ವಾರ ನಗರದಲ್ಲಿ ಒಂದು ದಿನ ಹೊರತುಪಡಿಸಿದರೆ ಬರೋಬ್ಬರಿ ಐದು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ.
ಜೂ.3ರಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಜೂ.1ರ ಸಂಜೆ 4 ಗಂಟೆಯಿಂದ ಜೂ.3ರ ಸಂಜೆ 4 ಗಂಟೆ ವರೆಗೂ ಮದ್ಯ ನಿಷೇಧಿಸಲಾಗಿದೆ.
ವಿಜಯಪುರ: ಸುಡು ಬಿಸಿಲಿಗೆ ಬೇಸತ್ತು ಬಿಯರ್ ಮೊರೆ ಹೋದ ಮದ್ಯಪ್ರಿಯರು..!
ಜೂ.4ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯು ವುದರಿಂದ ಅಂದು ಸಹ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿರ್ಬಂಧವಿದೆ. ವೈನ್ ಸ್ಟೋರ್, ಬಾರ್ ಆ್ಯಂಡ್ ರೆಸ್ಟೋರೆಂಟ್ನವರು ಸೇರಿದಂತೆ ಯಾರೂ ಮದ್ಯ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ.
ಜೂ.5ರಂದು ಎಂದಿನಂತೆ ಮದ್ಯ ಮಾರಾಟಕ್ಕೆ ಅವಕಾಶವಿದೆ. ಆದರೆ ಪುನಃ ಜೂ.6ರಂದು ನಗರದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ನಡೆಯುವುದರಿಂದ ಅಂದೂ ಸಹ ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ