ಅಂಬೇಡ್ಕರ್‌ ಅಂತ್ಯಕ್ರಿಯೆಗೂ ದಿಲ್ಲಿಯಲ್ಲಿ ಜಾಗ ನೀಡಲಿಲ್ಲ!

Kannadaprabha News   | stockphoto
Published : Mar 07, 2020, 09:11 AM IST
ಅಂಬೇಡ್ಕರ್‌ ಅಂತ್ಯಕ್ರಿಯೆಗೂ ದಿಲ್ಲಿಯಲ್ಲಿ ಜಾಗ ನೀಡಲಿಲ್ಲ!

ಸಾರಾಂಶ

ಅಂಬೇಡ್ಕರ್ ಅವರೇ ದೇಶದ ಪ್ರಧಾನಿ ಆಗಬೇಕಿತ್ತು. ಆದರೆ ಆಗಲಿಲ್ಲ. ಅವರ ಅಂತ್ಯಕ್ರಿಯೆ ದೆಹಲಿಯಲ್ಲಿಯೂ ಅಂದು ಜಾಗ ನೀಡಿರಲಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

ಬೆಂಗಳೂರು [ಮಾ.07]:  ಸ್ವಾತಂತ್ರ್ಯ ನಂತರದ ಭಾರತದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಇತರೆ ಗಾಂಧಿಗಳಿಗೆ ಮಾತ್ರ ಪ್ರಾತಿನಿಧ್ಯ ದೊರೆತಿದೆ. ಈ ದೇಶಕ್ಕೆ ನಿಜವಾಗಿಯೂ ಡಾ.ಬಿ.ಆರ್‌. ಅಂಬೇಡ್ಕರ್‌ ಅವರೇ ಪ್ರಧಾನಮಂತ್ರಿಗಳಾಗಬೇಕಿತ್ತು. 

ಆದರೆ, ಅವರಿಗೆ ದೆಹಲಿಯಲ್ಲಿ ಅಂತ್ಯಕ್ರಿಯೆಗೂ ಜಾಗ ನೀಡಲಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನದ ಬಗೆಗಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾನತೆಗಾಗಿ ಇಡೀ ಜೀವನವನ್ನು ಮುಡುಪಾಗಿಟ್ಟಸಮಾಜ ಚಿಕಿತ್ಸಕ ಡಾ.ಬಿ.ಆರ್‌. ಅಂಬೇಡ್ಕರ್‌. ಈ ದೇಶದಲ್ಲಿ ಸಂವಿಧಾನ ರಚಿಸುವ ತಜ್ಞರಿಲ್ಲ ಎಂದು ಜವಾಹರಲಾಲ್‌ ನೆಹರೂ ಅವರು ವಿಶ್ವದ ಸಂವಿಧಾನ ತಜ್ಞರನ್ನು ಹುಡುಕುವಾಗ ವಿಶ್ವಕ್ಕೆ ಶ್ರೇಷ್ಠ ಸಂವಿಧಾನ ರಚಿಸಿಕೊಟ್ಟವರು ಅಂಬೇಡ್ಕರ್‌. ನನ್ನ ಪ್ರಕಾರ ಅಂಬೇಡ್ಕರ್‌ ಅವರೇ ದೇಶದ ಪ್ರಧಾನಮಂತ್ರಿಯಾಗಬೇಕಾಗಿತ್ತು ಎಂದರು.

ಮಹಾಭಾರತ ಬರೆದದ್ದು ಕೀಳುಜಾತಿಯ ವಾಲ್ಮೀಕಿ: ಯತ್ನಾಳ್ ಮತ್ತೊಂದು ಎಡವಟ್ಟು..

ಹಿಂದೂಗಳಿಗೆ ಅಸ್ಪೃಶ್ಯರೇ ನೆರವಾಗಿದ್ದಾರೆ:

ಹಿಂದೂಗಳಿಗೆ ಪ್ರಮುಖ ಗ್ರಂಥಗಳು ಬೇಕಾದಾಗೆಲ್ಲಾ ಅಸ್ಪೃಶ್ಯರೇ ನೆರವಾಗಿದ್ದಾರೆ. ಇದನ್ನು ಡಾ.ಬಿ.ಆರ್‌. ಅಂಬೇಡ್ಕರ್‌ ಅವರು 1954ರ ಅಕ್ಟೋಬರ್‌ 3ರಂದು ಆಕಾಶವಾಣಿಗೆ ಮಾತನಾಡುತ್ತಾ ಹೇಳಿದ್ದಾರೆ. ‘ಹಿಂದೂಗಳಿಗೆ ವೇದಗಳು ಬೇಕಾಗಿದ್ದವು. ಆಗ ಕೆಳಜಾತಿಯವನಾದ ವ್ಯಾಸನನ್ನು ಕರೆದರು. ರಾಮಾಯಾಣ ಬೇಕಾದಾಗ ಅಸ್ಪೃಶ್ಯನಾದ ವಾಲ್ಮೀಕಿ ಬೇಕಾದ. ಆಡಳಿತಕ್ಕೆ ಸಂವಿಧಾನದ ಅಗತ್ಯವಿದೆ. ಹೀಗಾಗಿ ನನ್ನನ್ನು ಕರೆದರು’ ಎಂದು ಅಂಬೇಡ್ಕರ್‌ ಹೇಳಿದ್ದರು. ಇದು ಭಾರತೀಯ ಸಂಸ್ಕೃತಿ ಎಂದೂ ಜಾತಿ ಮೇಲೆ ನಿಂತಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಯತ್ನಾಳ್‌ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ