ಜಾತಿಗಣತಿ ವಿರೋಧಕ್ಕೆ ಡಿಕೆಶಿ ಸಹಿ ಏಕೆ?: ರಾಯರೆಡ್ಡಿ ಕಿಡಿ

Published : Nov 23, 2023, 09:16 AM ISTUpdated : Nov 23, 2023, 05:45 PM IST
ಜಾತಿಗಣತಿ ವಿರೋಧಕ್ಕೆ ಡಿಕೆಶಿ ಸಹಿ ಏಕೆ?: ರಾಯರೆಡ್ಡಿ ಕಿಡಿ

ಸಾರಾಂಶ

ಶಾಸಕರು ಬೇಕಿದ್ದರೆ ಸಹಿ ಹಾಕಲಿ. ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು ಸಹಿ ಹಾಕಿರುವುದಕ್ಕೂ ನನ್ನ ಆಕ್ಷೇಪವಿಲ್ಲ. ಯಾಕೆಂದರೆ ಅವರು ವೀರಶೈವ ಲಿಂಗಾಯತ ಸಮುದಾಯದ ರಾಷ್ಟ್ರೀಯ ಅಧ್ಯಕ್ಷರು. ಆದರೆ ವರದಿಯನ್ನು ಸ್ವೀಕರಿಸಬೇಕಾಗಿರುವ ಸರ್ಕಾರದ ಅಂಗವಾಗಿರುವ ಸಚಿವರೇ ವರದಿ ತಿರಸ್ಕರಿಸುವುದಕ್ಕೆ ಸಹಿ ಹಾಕುವುದು ಸರಿಯಲ್ಲ: ಮಾಜಿ ಸಚಿವ ಬಸವರಾಜ ರಾಯರೆಡ್ಡಿ

ಬೆಂಗಳೂರು(ನ.23):  ‘ಜಾತಿ ಗಣತಿ ವರದಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಸಹಿ ಹಾಕಿರುವುದಕ್ಕೆ ನನ್ನ ಆಕ್ಷೇಪವಿದೆ. ಸಚಿವರು ಸರ್ಕಾರದ ಒಂದು ಭಾಗ. ಅವರೇ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಸಹಿ ಹಾಕಿದರೆ ಹೇಗೆ?’ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ಬೇಕಿದ್ದರೆ ಸಹಿ ಹಾಕಲಿ. ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು ಸಹಿ ಹಾಕಿರುವುದಕ್ಕೂ ನನ್ನ ಆಕ್ಷೇಪವಿಲ್ಲ. ಯಾಕೆಂದರೆ ಅವರು ವೀರಶೈವ ಲಿಂಗಾಯತ ಸಮುದಾಯದ ರಾಷ್ಟ್ರೀಯ ಅಧ್ಯಕ್ಷರು. ಆದರೆ ವರದಿಯನ್ನು ಸ್ವೀಕರಿಸಬೇಕಾಗಿರುವ ಸರ್ಕಾರದ ಅಂಗವಾಗಿರುವ ಸಚಿವರೇ ವರದಿ ತಿರಸ್ಕರಿಸುವುದಕ್ಕೆ ಸಹಿ ಹಾಕುವುದು ಸರಿಯಲ್ಲ ಎಂದರು.

ಜಾತಿಗಣತಿ ವರದಿಯಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ: ಇದಕ್ಕೆ ವಿರೋಧವೇಕೆ ಎಂದ ಸಿದ್ದರಾಮಯ್ಯ?

ಜಾತಿಗಣತಿಯನ್ನು ರಾಜಕೀಯವಾಗಿ ಬಳಸಬಾರದು. ಅಸಮಾನತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿಗಳ ಬಗ್ಗೆ ಜಾತಿವಾರು ಸಮೀಕ್ಷೆ ನಡೆಸಲಾಗಿದೆ. ಲಿಂಗಾಯತ ಹಾಗೂ ಒಕ್ಕಲಿಗ ಬಲಿಷ್ಠ ಜಾತಿಗಳು. ಅವರಿಗೆ ಕೆಲವು ಸಂದೇಹಗಳು ಬಂದಿರಬಹುದು. ಅವರ ಜತೆ ಮುಖ್ಯಮಂತ್ರಿಯವರು ಮಾತನಾಡಲಿ ಎಂದು ಸಲಹೆ ನೀಡಿದರು.

ನಿಗಮ-ಮಂಡಳಿ ಬೇಡ:

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರ ಜತೆಗಿನ ಸಭೆ ಬಗ್ಗೆ ಮಾತನಾಡಿದ ಅವರು, ಸುರ್ಜೇವಾಲ ಅವರು ಕರೆದು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಗಮ-ಮಂಡಳಿ ಬಗ್ಗೆ ಆಸಕ್ತಿ ಇದೆಯೇ ಎಂದು ಕೇಳಿದರು. ನನಗೆ ನಿಗಮ-ಮಂಡಳಿ ಆಸಕ್ತಿ ಇಲ್ಲ. ನಾನು ಈಗ ಇರುವುದರಲ್ಲೇ ಖುಷಿಯಾಗಿದ್ದೇನೆ. ರಾಯರೆಡ್ಡಿಗೆ ಏನು ಮಾಡಬೇಕು ಎಂದು ನನಗೆ ಗೊತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜನರಿಗೆ ಅನುಕೂಲವಾಗುವ ಬೇರೆ ಯಾವ ಕೆಲಸವಾದರೂ ಮಾಡುವುದಾಗಿ ತಿಳಿಸಿದ್ದೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್‌ನಲ್ಲಿ ಶಾರುಖ್ ಪುತ್ರನ ದುರ್ವರ್ತನೆ ಕೇಸ್: ಆರ್ಯನ್ ಖಾನ್ ಸೇರಿ ಮೂವರ ವಿರುದ್ಧ ಹಿಂದೂ ಮುಖಂಡನಿಂದ ದೂರು
Namma Metro Update: ಕೆಂಗೇರಿ ಮೆಟ್ರೋ ದುರಂತ; ಮೃತರ ಗುರುತು ಪತ್ತೆ, ಸಂಚಾರ ಸಹಜ ಸ್ಥಿತಿಗೆ!