ಸರ್ಕಾರಕ್ಕೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ ಹೊರಟ್ಟಿ

Kannadaprabha News   | Asianet News
Published : Mar 25, 2021, 08:38 AM IST
ಸರ್ಕಾರಕ್ಕೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ ಹೊರಟ್ಟಿ

ಸಾರಾಂಶ

ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು  ಸರ್ಕಾರಕ್ಕೆ ಸಭಾಪತಿ ಪತ್ರ ಬರೆದು ತಿಳಿಸಿದ್ದಾರೆ.  ಕಳವಳ ವ್ಯಕ್ತಪಡಿಸಿದ್ದಾರೆ. 

 ಬೆಂಗಳೂರು (ಮಾ.25):  ರಾಜ್ಯದ ಪಶುಸಂಗೋಪನೆ ಇಲಾಖೆಯಲ್ಲಿ ಎಂಟು ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಅನ್ಯ ಇಲಾಖೆಗಳಿಗೆ ನಿಯೋಜನೆಗೊಂಡಿರುವ 1200 ಸಿಬ್ಬಂದಿಯನ್ನು ಮಾತೃ ಇಲಾಖೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದು ಶ್ಲಾಘನೀಯ. ಆದರೆ, ಈ ಪ್ರಕ್ರಿಯೆಯಿಂದ ಪಶು ಸಂಗೋಪನಾ ಇಲಾಖೆಯ ಅಭಿವೃದ್ಧಿ ಮೇಲೆ ಪರಿಣಾಮ ಬೀರುವುದಲ್ಲದೆ, ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುವಂತಿದೆ ಎಂದು ಅವರು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಅವರಿಗೆ ಬರೆದಿರುವ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಖಾಸಗಿ ಶಾಲೆಗಳಿಗೆ ನೆರವು ನೀಡಲು ಸರ್ಕಾರಕ್ಕೆ ಪತ್ರ ಬರೆದ ಹೊರಟ್ಟಿ

ಈ ಹಿನ್ನೆಲೆಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಪಶು ಇಲಾಖೆಯಲ್ಲಿ ನೇಮಕಗೊಂಡು ಬೇರೆ ಇಲಾಖೆಗೆ ನಿಯೋಜನೆಗೊಂಡ ಸಿಬ್ಬಂದಿಗಳ ಸೇವೆಯನ್ನು ಮಾತೃ ಇಲಾಖೆಗೆ ಹಿಂಪಡೆಯುವುದು ಅವಶ್ಯಕವಾಗಿದೆ. ಈ ಬಗ್ಗೆ ತುರ್ತು ಕ್ರಮ ಕೈಗೊಂಡು, ಕೃಷಿ ಪ್ರಧಾನವಾದ ನಮ್ಮ ರಾಜ್ಯದಲ್ಲಿ ಎಲ್ಲ ರಾಜ್ಯಗಳ ಯೋಗಕ್ಷೇಮಕ್ಕೆ ರೈತಾಪಿ ವರ್ಗದವರಿಗೆ ಅನುಕೂಲ ಕಲ್ಪಿಸಿಕೊಡಬೇಕು. 

ಕೃಷಿ ಪ್ರಧಾನವಾದ ನಮ್ಮ ರಾಜ್ಯದಲ್ಲಿ ರಾಸುಗಳ ಅಭಿವೃದ್ಧಿ, ಕಾಳಜಿ ಹಾಗೂ ಆರೈಕೆ ನಮ್ಮೆಲ್ಲರ ಹೊಣೆಯೇ ಸರಿ. ಪ್ರಸ್ತುತ ಪಶು ಸಂಗೋಪನೆ ಇಲಾಖೆಯಲ್ಲಿ ಸುಮಾರು 8000 ಹುದ್ದೆಗಳು ಖಾಲಿ ಇರುವುದಲ್ಲದೆ, ಪಶು ಸಂಗೋಪನಾ ಇಲಾಖೆಯಲ್ಲಿ ನೇಮಕಗೊಂಡ ಸುಮಾರು 1200 ಸಿಬ್ಬಂದಿ ವರ್ಗದವರು ಬೇರೆ ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!