ಕೋವಿಡ್ ವೇಳೆ ವೈದ್ಯರಿಂದ ಹಲ್ಲೆ ಆರೋಪ ಡ್ರೋಣ್ ಪ್ರತಾಪ್ ಗೆ ಲೀಗಲ್ ನೋಟಿಸ್ ಕಳುಹಿಸಿದ ಡಾ.ಪ್ರಯಾಗ್

Published : Dec 19, 2023, 05:16 AM IST
ಕೋವಿಡ್ ವೇಳೆ ವೈದ್ಯರಿಂದ ಹಲ್ಲೆ ಆರೋಪ ಡ್ರೋಣ್ ಪ್ರತಾಪ್ ಗೆ ಲೀಗಲ್ ನೋಟಿಸ್ ಕಳುಹಿಸಿದ ಡಾ.ಪ್ರಯಾಗ್

ಸಾರಾಂಶ

ಕೋವಿಡ್ ಕ್ವಾರಂಟೈನ್ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದ ಡ್ರೋಣ್ ಪ್ರತಾಪ್ ಅವರಿಗೆ ಡಾ.ಪ್ರಯಾಗ್ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಬೆಂಗಳೂರು (ಡಿ.19): ಕೋವಿಡ್ ಕ್ವಾರಂಟೈನ್ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದ ಡ್ರೋಣ್ ಪ್ರತಾಪ್ ಅವರಿಗೆ ಡಾ.ಪ್ರಯಾಗ್ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಪಶು ವೈದ್ಯರಾಗಿರುವ ಡಾ.ಪ್ರಯಾಗ್(Dr Prayag) ಅವರು ಕೋವಿಡ್ ಸಮಯದಲ್ಲಿ ಬಿಬಿಎಂಪಿ(BBMP)ಯಲ್ಲಿ ನೋಡಲ್ ಅಧಿಕಾರಿಯಾಗಿದ್ದರು. ಕ್ವಾರಂಟೈನ್ ಸಮಯದಲ್ಲಿ ಬಿಬಿಎಂಪಿ ಅಧಿಕಾರಿ ತಮ್ಮ ಮೇಲೆ ಹಲ್ಲೆ ನಡೆಸಿ ಟಾರ್ಚರ್ ನೀಡಿದ್ದರು ಎಂದು ಬಿಗ್ ಬಾಸ್(Biggboss Kannada) ವೇದಿಕೆಯಲ್ಲಿ ಪ್ರತಾಪ್(Drone pratap) ಆರೋಪಿಸಿದ್ದರು. 

ತಮ್ಮ ವಿರುದ್ಧದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಡಾ.ಪ್ರಯಾಗ್ ಅವರು, ತಮ್ಮ ಬಗ್ಗೆ ತಪ್ಪು ಮಾಹಿತಿ ನೀಡಿದ್ದಲ್ಲದೇ, ಮಾನಹಾನಿ ಆಗುವಂತ ಮಾತುಗಳನ್ನು ಆಡಿರುವ ಡ್ರೋಣ್ ಪ್ರತಾಪ್ ಗೆ ತಮ್ಮ ವಕೀಲರ ಮೂಲಕ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

'ಬೀಗ್​ ಬಾಸ್'​ ಮನೆಯಲ್ಲಿ ಲೂಸ್​-ಟೈಟ್​ ಮಾಡಲು ಎಂಟ್ರಿ ಕೊಟ್ಟ ಪ್ಲಂಬರ್! ಸ್ಪರ್ಧಿಗಳು ಶಾಕ್​...

ಪ್ರತಾಪ್ ಬಿಗ್ ಬಾಸ್ ವೇದಿಕೆಯಲ್ಲಿಯೇ  ಕ್ಷಮೆಯಾಚನೆ ಮಾಡಬೇಕು. ಲಿಖಿತ ರೂಪದಲ್ಲಿ ಕ್ಷಮೆಯಾಚನೆ ಮಾಡಬೇಕು ಎಂದು ವಕೀಲರ ಮೂಲಕ ಡಾ.ಪ್ರಯಾಗ್ ಅವರು ಲೀಗಲ್ ನೋಟಿಸ್‌ ಕಳುಹಿಸಿದ್ದಾರೆ. ಲಿಖಿತ ರೂಪದಲ್ಲಿ ಕ್ಷಮೆಯಾಚನೆ ಮಾಡದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ತನ್ನ ಕ್ವಾರಂಟೈನ್ ಕಹಾನಿ ಹೇಳಿಕೊಂಡು ಡ್ರೋಣ್ ಪ್ರತಾಪ್, ಬಿಬಿಎಂಪಿ ನೋಡಲ್ ಅಧಿಕಾರಿ ಮೇಲೆ ಗಂಭೀರ ಆರೋಪ ಮಾಡಿದ್ದರು. ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ಮೆಂಟಲಿ ಅನ್‍ಸ್ಟೇಬಲ್ ಅಂತಾ ಸಹಿ ಮಾಡುವಂತೆ ತಲೆಗೆ ಹೊಡೆದು ಕಿರುಕುಳ ನೀಡಿದ್ದರು. ಹೋಟೆಲ್‍ನಿಂದ ಕೆಳಗೆ ಬಂದಮೇಲೆ ನನಗೆ ಏನೇನು ಮಾಡಿದ್ದರು ಅದನ್ನ ಸ್ವಲ್ಪ ಹೇಳಿದೆ. ಆದರೆ ಇವ್ನು ಸುಳ್ಳು ಹೇಳ್ತಾನೆ. ಇವ್ನು ಹೇಳೋದೇ ಸುಳ್ಳು.. ನಂಬಬೇಡಿ ಎಂದು ಮಾಧ್ಯಮಗಳಿಗೆ ಹೇಳಿ ಕಳುಹಿಸಿದರು. ಕ್ವಾರಂಟೈನ್‍ನಲ್ಲಿ ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದು ಡ್ರೋಣ್ ಪ್ರತಾಪ್ ಆರೋಪ ಮಾಡಿದ್ದರು

ಮೊನ್ನೆ ಅಧ್ಯಾತ್ಮ ಪಾಠ ಮಾಡಿದ ಸಂಗೀತ ಈಗ ಒಬ್ಬೊಬ್ರೇ ಮಾತಾಡ್ತಿದ್ದಾರೆ, ಅಯ್ಯೋ ಸಂಗೀತಾಗೆ ಏನಾಯ್ತು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: ಸಿಎಂ ಬಗ್ಗೆ ಸಚಿವ ಬೈರತಿ ಸುರೇಶ್ ಗುಣಗಾನ