ಬೆಂಗಳೂರಲ್ಲಿ ಬಸ್ ನಿಲ್ದಾಣಗಳೇ ಸೇಫ್ ಇಲ್ಲ! ರಾತ್ರೋರಾತ್ರಿ ಬೇರು ಸಮೇತ ಕಿತ್ತು ಬೇರೆಡೆ ಸಾಗಿಸಿದ ಭೂಪರು!

By Ravi JanekalFirst Published Nov 28, 2023, 12:55 PM IST
Highlights

ರಸ್ತೆಯಲ್ಲಿ ಬಸ್ ನಿಲ್ಲಿಸಲು ಜಾಗವಿಲ್ಲ ಎಂದು ಬಸ್ ನಿಲ್ದಾಣವನ್ನೇ ರಾತ್ರೋರಾತ್ರಿ ಬೇರೆಡೆ ಶಿಫ್ಟ್ ಮಾಡಿದ ಭೂಪರು. ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಇಲಾಖೆ ಅನುಮತಿ ಪಡೆಯದೇ ಶಿಫ್ಟ್ ಮಾಡಿರುವ ಖಾಸಗಿ ವ್ಯಕ್ತಿಗಳು. ಇತ್ತ ಬಸ್ ನಿಲ್ದಾಣ ಇಲ್ಲದ್ದು ಕಂಡು ಸಾರ್ವಜನಿಕರು ಹುಡುಕಾಡುವಂತಾಗಿದೆ. ಎಂಎಸ್ ರಾಮಯ್ಯ ಬಳಿ ಇದ್ದ ಬಸ್ ನಿಲ್ದಾಣ ಎತ್ತಂಗಡಿ

ಬೆಂಗಳೂರು (ನ.28): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ, ಶಾಪ್, ಬೈಕ್ ಯಾವುದಕ್ಕೂ ಸುರಕ್ಷತೆ ಇಲ್ಲದಂತಾಗಿದೆ. ಇಲ್ಲಿ ದಿನನಿತ್ಯ ಕಳ್ಳತನ ಸಾಮಾನ್ಯ ಎಂಬಂತಾಗಿದೆ. ಬೆಂಗಳೂರಿನ ಪೊಲೀಸರು ಎಷ್ಟೇ ಕಠಿಣ ಕ್ರಮ, ಎಚ್ಚರಿಕೆಗೂ ಕೊಟ್ಟರೂ ಹೆದರದ ಖದೀಮರು ಇವರು. ಇತ್ತ ಬಿಬಿಎಂಪಿ ಅಧಿಕಾರಿಗಳಿಗೂ ಬಗ್ಗುತ್ತಿಲ್ಲ. ಕಳೆದ ತಿಂಗಳು ಕನ್ನಿಂಗ್‌ಹ್ಯಾಂ ರಸ್ತೆಯ ಬಸ್ ನಿಲ್ದಾಣವನ್ನೇ ಕದ್ದಿದ್ದ ಕಳ್ಳರು, ಇಂದು ನೋಡಿದ್ರೆ ಎಂಎಸ್ ರಾಮಯ್ಯ ಬಳಿ ಇದ್ದ ಬಸ್ ನಿಲ್ದಾಣವೇ ಮಂಗಮಾಯ! ಬಸ್ ನಿಲ್ದಾಣವೇ ನಾಪತ್ತೆಯಾಗಿದ್ದನ್ನು ಕಂಡು ಶಾಕ್ ಆದ ಬಿಬಿಎಂಪಿ ಅಧಿಕಾರಿಗಳು.

ಖಾಸಗಿ ವ್ಯಕ್ತಿಗಳಿಂದ ಬಸ್ ನಿಲ್ದಾಣ ಮಂಗಮಾಯ:

Latest Videos

ರಸ್ತೆಯಲ್ಲಿ ಬಸ್ ನಿಲ್ಲಿಸಲು ಜಾಗವಿಲ್ಲ ಅಂತಾ ಇಡೀ ಬಸ್ ನಿಲ್ದಾಣವನ್ನೇ ಬೇರುಸಮೇತ ಕಿತ್ತು 60 ಮೀಟರ್ ದೂರಕ್ಕೆ ಶಿಫ್ಟ್ ಮಾಡಿದ ಭೂಪರು. ಎಂ ಎಸ್ ರಾಮಯ್ಯ ಸಿಗ್ನಲ್ ಬಳಿ ಇದ್ದ ಬಸ್ ನಿಲ್ದಾಣ. ಸಾಮಾನ್ಯವಾಗಿ ಬಿಬಿಎಂಪಿ ಅಧಿಕಾರಿಗಳಿಂದ, ಸ್ಥಳೀಯ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬೇಕು. ಆದರೆ ಯಾವುದೇ ಅನುಮತಿ ಪಡೆಯದೇ ಕೇವಲ ಮೌಖಿಕವಾಗಿ ಅಧಿಕಾರಿಗಳ ಗಮನಕ್ಕೆ ತಂದು ಬಳಿಕ ಮರಗಳನ್ನ ಕಟ್ ಮಾಡಿ ಬಸ್ ನಿಲ್ದಾಣವನ್ನ ಶಿಫ್ಟ್ ಮಾಡಿರುವ ಖಾಸಗಿ ವ್ಯಕ್ತಿಗಳು. 

ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ ಸಮೀಪ ಕಾಣೆಯಾಗಿದ್ದ ಬಸ್‌ ತಂಗುದಾಣ ಕೊನೆಗೂ ಪತ್ತೆ!

 ಮೊನ್ನೆ ರಾತ್ರಿ ಬಸ್ ನಿಲ್ದಾಣ ತೆರವು. ಆಸ್ಪತ್ರೆ, ಕಾಲೇಜುಗೆ ಹತ್ತಿರವಾಗುತ್ತೆ ಅಂತಾ ಬಿಬಿಎಂಪಿಯಿಂದ ನಿರ್ಮಾಣವಾಗಿ ಬಸ್ ನಿಲ್ದಾಣ. ಆದರೆ ಇದ್ದಕ್ಕಿದ್ದಂತೆ ನಿಲ್ದಾಣ ತೆರವು ಮಾಡಿದ ಹಿನ್ನಲೆ. ಇತ್ತ ಬಸ್ ನಿಲ್ದಾಣ ಇಲ್ಲದೇ ಬಸ್ ನಿಲ್ಲದೇ ಮುಂದೆ ಸಾಗುತ್ತಿರುವ ಬಸ್ ಚಾಲಕರು. ಇತ್ತ ಸಾರ್ವಜನಿಕರು ಸಹ ನಿನ್ನೆ ಇದ್ದುದ್ದು ಇವತ್ತು ಕಾಣುತ್ತಿಲ್ಲವಲ್ಲ ಹುಡುಕಾಡ್ತಿದ್ದಾರೆ.

ಬೆಂಗಳೂರು ಬಿಎಂಟಿಸಿ ಬಸ್‌ ನಿಲ್ದಾಣವನ್ನೇ ಕದ್ದೊಯ್ದ ಕಳ್ಳರು: ಬೆಚ್ಚಿಬಿದ್ದ ಬಿಬಿಎಂಪಿ ಅಧಿಕಾರಿಗಳು

click me!