ಆಸ್ತಿ ತೆರಿಗೆ ಕಟ್ಟ​ದವರ ಸ್ಥಿರಾಸ್ತಿ ಜಪ್ತಿ?

Kannadaprabha News   | Asianet News
Published : Sep 21, 2020, 09:47 AM IST
ಆಸ್ತಿ ತೆರಿಗೆ ಕಟ್ಟ​ದವರ ಸ್ಥಿರಾಸ್ತಿ ಜಪ್ತಿ?

ಸಾರಾಂಶ

ಚರಾಸ್ತಿ ಜೊತೆಗೆ ಸ್ಥಿರಾಸ್ತಿ ಜಪ್ತಿಗೆ ಬಿಬಿಎಂಪಿ ಚಿಂತನೆ| ಕೆಎಂಸಿ ಕಾಯ್ದೆಗೆ ನಿಯಮ ಅಳವಡಿಸಲು ಸರ್ಕಾರಕ್ಕೆ ಪ್ರಸ್ತಾವನೆ| ಸುಸ್ತಿದಾರರ ಬಾಕಿ ವಸೂಲಿಗೆ ಚರ ಆಸ್ತಿ ಮಾತ್ರ ವಸೂಲಿಗೆ ಮಾತ್ರ ಕೆಎಂಸಿ ಕಾಯ್ದೆಯಲ್ಲಿ ಅವಕಾಶ| 

ಬೆಂಗಳೂರು(ಸೆ.21): ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿ ಕೊಂಡವರ (ಸುಸ್ತಿದಾರರ) ವಸೂಲಿಗೆ ಚರ ಆಸ್ತಿ ಜೊತೆಗೆ ಸ್ಥಿರ ಆಸ್ತಿಯ ಜಪ್ತಿಗೆ ಕೆಎಂಸಿ ಕಾಯ್ದೆ ತಿದ್ದುಪಡಿಗೆ ಪಾಲಿಕೆಯ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2008ರಿಂದ ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆ ಜಾಲ್ತಿಯಲ್ಲಿದೆ. ಆಸ್ತಿ ತೆರಿಗೆ ಬಾಕಿದಾರರಿಗೆ ದುಪ್ಪಟ್ಟು ದಂಡ ವಿಧಿಸಿ ನೋಟಿಸ್‌ ನೀಡಿ ವಸೂಲಿಗೆ ಹಾಗೂ ಚರ ಆಸ್ತಿಗಳನ್ನು ಮಾತ್ರ ಜಪ್ತಿ ಮಾಡುವುದಕ್ಕೆ ಕೆಎಂಸಿ ಕಾಯ್ದೆ 1976ರ ಅಡಿಯಲ್ಲಿ ಅವಕಾಶ ವಿದೆ. ಈ ರೀತಿ ಜಪ್ತಿ, ವಸೂಲಿ ಮಾಡಿದರೂ ಕೆಲವು ವೇಳೆ ಆಸ್ತಿ ತೆರಿಗೆ ಬಾಕಿ ಪೂರ್ಣ ಪ್ರಮಾಣದಲ್ಲಿ ವಸೂಲಿ ಆಗುತ್ತಿಲ್ಲ. ಹೀಗಾಗಿ, ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ನಿಯಮ 164ರಿಂದ 170 ಅಡಿಯಲ್ಲಿ ಬಾಕಿದಾರರ ಚರ ಆಸ್ತಿಯ ಜತೆಗೆ ಸ್ಥಿರ ಆಸ್ತಿಯ ಜಪ್ತಿ, ಹರಾಜು ಮತ್ತು ಮಾರಾಟಕ್ಕೆ ಅವಕಾಶವಿದ್ದು, ಆ ನಿಯಮವನ್ನು ಕೆಎಂಸಿ ಕಾಯ್ದೆಯಲ್ಲಿ ಅಳವಡಿಸುವ ಕುರಿತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರು ಬಿಬಿಎಂಪಿಯ ಆಡಳಿತಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಪ್ರಮುಖ ಜಂಕ್ಷನ್‌ ಸುಂದರವಾಗಿ ಅಭಿವೃದ್ಧಿಪಡಿಸಿ: ಗೌರವ್‌ ಗುಪ್ತಾ

ಸರ್ಕಾರದ ಒಪ್ಪಿಗೆ ಬೇಕು:

ಆಸ್ತಿ ತೆರಿಗೆ ಬಾಕಿದಾರರ ಸ್ಥಿರ ಆಸ್ತಿಗೆ ಜಪ್ತಿ, ಮಾರಾಟ ಹಾಗೂ ಹರಾಜು ಮಾಡುವ ಬಗ್ಗೆ ಈ ಆಯುಕ್ತರು ಮಂಡಿಸಿರುವ ಪ್ರಸ್ತಾವನೆಯನ್ನು ಆಡಳಿತಾಧಿಕಾರಿ ಅನುಮೋದನೆ ನೀಡಿದ ಬಳಿಕೆ ಸರ್ಕಾರದ ಒಪ್ಪಿಗೆ ಕಳುಹಿಸಲಾಗುತ್ತದೆ. ಸರ್ಕಾರ ಒಪ್ಪಿಗೆ ನೀಡಿ ಕೆಎಂಸಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿದರೆ ನಂತರ ಜಾರಿಗೆ ಬರಲಿದೆ.

ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಆಯುಕ್ತರು ಎನ್‌.ಮಂಜುನಾಥ ಪ್ರಸಾದ್‌ ಅವರು, ಸುಸ್ತಿದಾರರ ಬಾಕಿ ವಸೂಲಿಗೆ ಚರ ಆಸ್ತಿ ಮಾತ್ರ ವಸೂಲಿಗೆ ಮಾತ್ರ ಕೆಎಂಸಿ ಕಾಯ್ದೆಯಲ್ಲಿ ಅವಕಾಶವಿದೆ. ಕರ್ನಾಟಕ ಭೂ ಕಂದಾಯ ಅಧಿ ನಿಯಮದಂತೆ ಸ್ಥಿರ ಆಸ್ತಿ ವಶಕ್ಕೆ ಕೆಎಂಸಿ ಕಾಯ್ದೆ ತಿದ್ದುಪಡಿ ಪ್ರಸ್ತಾವನೆಯನ್ನು ಆಡಳಿತಾಧಿಕಾರಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಅಧಿವೇಶನಕ್ಕೂ ಮೊದಲೇ ಬ್ರದರ್ಸ್ ಒಗ್ಗಟ್ಟು: ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜು
ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ