ಕೊರೋನಾ ಕಾಟ: ಬೆಂಗಳೂರಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್‌?

Published : Jul 30, 2020, 07:53 AM IST
ಕೊರೋನಾ ಕಾಟ: ಬೆಂಗಳೂರಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್‌?

ಸಾರಾಂಶ

ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ| ರಸ್ತೆ ಮತ್ತು ಮನೆಗಳನ್ನು ಕಂಟೈನ್ಮೆಂಟ್‌ ಮಾಡಲಾಗಿದೆ| ಗಣೇಶ ಉತ್ಸವ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಗುಂಪು ಸೇರುವ ಸಾಧ್ಯತೆ ಇದೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗಲಿದೆ| ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿರಲು ಚಿಂತನೆ|

ಬೆಂಗಳೂರು(ಜು.30): ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶ ಚತುರ್ಥಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವಕ್ಕೆ ಅವಕಾಶ ನೀಡದಿರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ರಸ್ತೆ ಮತ್ತು ಮನೆಗಳನ್ನು ಕಂಟೈನ್ಮೆಂಟ್‌ ಮಾಡಲಾಗಿದೆ. ಗಣೇಶ ಚತುರ್ಥಿ (ಆಗಸ್ಟ್‌ 21 ಮತ್ತು 22) ಉತ್ಸವ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಗುಂಪು ಸೇರುವ ಸಾಧ್ಯತೆ ಇದೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿರಲು ಚಿಂತನೆ ಮಾಡಲಾಗಿದೆ. ಈ ಬಗ್ಗೆ ಸರ್ಕಾರಕ್ಕೂ ಸಹ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಹಾಸಿಗೆಗಳ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳನ್ನೇ ಕಾಯಿಸಿದ ಆಸ್ಪತ್ರೆ

ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಮನೆಯಲ್ಲಿಯೇ ವಿಸರ್ಜನೆ ಮಾಡಬಹುದು ಅಥವಾ ಬಿಬಿಎಂಪಿಯಿಂದ ಪ್ರತಿವರ್ಷ ವ್ಯವಸ್ಥೆ ಮಾಡುವಂತೆ ಮೊಬೈಲ್‌ ವಿಸರ್ಜನೆ ವಾಹನ ವ್ಯವಸ್ಥೆ ಮಾಡಲಾಗುವುದು ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!