
ಬೆಂಗಳೂರು (ಜು. 10): ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ದಿನನಿತ್ಯ ಬಾಡೂಟ ಒದಗಿಸಲು ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟ ಯೋಜನೆಯೊಂದಿಗೆ ಟೆಂಡರ್ ಕೂಡ ಕರೆದಿದೆ. ಜನತೆಗೆ ಸಮರ್ಪಕ ಮೂಲಸೌಕರ್ಯಗಳಾದ ರಸ್ತೆ, ಆಹಾರ, ನೀರು, ವಸತಿ ವ್ಯವಸ್ಥೆ ಕಲ್ಪಿಸದಿದ್ದರೂ, ಬೀದಿ ನಾಯಿಗಳಿಗೆ ಪ್ರತಿದಿನ ಹೊಟ್ಟೆತುಂಬಾ ಚಿಕನ್ ಬಿರಿಯಾನಿ ನೀಡಲು ಬಿಬಿಎಂಪಿ 2.80 ಕೋಟಿ ರೂ. ವೆಚ್ಚದ ಯೋಜನೆ ಜಾರಿಗೆ ತರುವತ್ತ ಹೆಜ್ಜೆ ಹಾಕಿದೆ.
ಪಾಲಿಕೆ ತಯಾರಿಸಿರುವ ಆಹಾರ ತಯಾರಿ ಪ್ಯಾಕೇಜು ಈ ಕೆಳಗಿನಂತಿದೆ:
ಬಿಬಿಎಂಪಿಯ 8 ವಲಯಗಳಲ್ಲಿ ನಿತ್ಯ ಬಾಡೂಟ:
ಬೆಂಗಳೂರು ನಗರದಲ್ಲಿ ಒಟ್ಟು 2.80 ಲಕ್ಷ ಬೀದಿ ನಾಯಿಗಳಿದ್ದು, ಈ ಯೋಜನೆಯು ಕೇವಲ 5,000 ನಾಯಿಗಳಿಗೆ ಮಾತ್ರ ಲಭ್ಯವಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ, ಯೋಜನೆಯ ವ್ಯಾಪ್ತಿ ಮತ್ತು ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ. ಬಿಬಿಎಂಪಿಯ ಈ ಬಾಡೂಟ ಯೋಜನೆ ಮಾನವೀಯತೆಯ ವಿಶಿಷ್ಟ ಪ್ರಯೋಗವೋ ಅಥವಾ ತೆರಿಗೆದಾರರ ಹಣದ ದುರುಪಯೋಗವೋ ಎಂಬ ಚರ್ಚೆಗೆ ದಾರಿ ಹಾಕಿದೆ. ಬಿಬಿಎಂಪಿಯ ಈ ನಿರ್ಧಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಹಲವು ಸಂಘಟನೆಗಳು ಹಾಗೂ ನಾಗರಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. 'ಜನರ ಹೊಟ್ಟೆಗೆ ಹಿಟ್ಟಿಲ್ಲ, ನಾಯಿಗಳಿಗೆ ಚಿಕನ್ ಬಿರಿಯಾನಿ ಭಾಗ್ಯ' ಎಂದು ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ