
ಬೆಂಗಳೂರು (ಜೂ.26): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಒಣಗಿದ ಮರಗಳು ಮತ್ತು ಅಪಾಯಕಾರಿ ಕೊಂಬೆಗಳ ತೆರವಿಗೆ ಮುಂದಾಗಿದೆ. ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಈ ಕಾರ್ಯಕ್ಕೆ ಸಹಾಯವಾಗಿ ಬಿಬಿಎಂಪಿ 1533 ಎಂಬ ಟೋಲ್ಫ್ರೀ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಒಣಗಿದ ಮರಗಳು ಅಥವಾ ಅಪಾಯಕಾರಿ ಕೊಂಬೆಗಳ ಬಗ್ಗೆ ದೂರು ಇದ್ದರೆ, ನಾಗರಿಕರು ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಬಿಬಿಎಂಪಿ ಕಮಿಷನರ್ ಮನವಿ ಮಾಡಿದ್ದಾರೆ.
ಬಿಬಿಎಂಪಿಯ 8 ವಲಯಗಳಲ್ಲಿ ವಿಧಾನಸಭಾ ಕ್ಷೇತ್ರವಾರು ದೂರು ಸಲ್ಲಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ಕೆಳಗಿನಂತೆ ವಿವರಗಳು:
1. ಪಶ್ಚಿಮ ವಲಯ:
-ರಾಜಾಜಿನಗರ, ಗೋವಿಂದರಾಜನಗರ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ಸುದರ್ಶನ್ – 9480683341-ಮಹಾಲಕ್ಷ್ಮಿಪುರಂ, ಗಾಂಧಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ರಾಜೇಶ್ - 9449175978
2. ಪೂರ್ವ ವಲಯ:
-ಶಾಂತಿನಗರ, ಸಿ.ವಿ. ರಾಮನ್ ನಗರ, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ನಾಗೇಂದ್ರ – 9113530344-ಶಿವಾಜಿನಗರ, ಹೆಬ್ಬಾಳ, ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ- ಶಿವಣ್ಣ - 9164597895
3. ದಕ್ಷಿಣ ವಲಯ:
-ಬಸವನಗುಡಿ, ವಿಜಯನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ಚಂದ್ರಪ್ಪ ವಿ - 9480683655-ಚಿಕ್ಕಪೇಟೆ, ಜಯನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿಯಾದ ಬಿ.ಬಿ ಮೇಟಿ – 9740576919
-ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾದ ಹರೀಶ್ ಹೆಚ್.ಆರ್ - 7676165253
4. ದಾಸರಹಳ್ಳಿ ವಲಯ:
-ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ರಾಜಪ್ಪ ಕೆ.ಎನ್ - 9448234928
5. ಬೊಮ್ಮನಹಳ್ಳಿ ವಲಯ:
-ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ನರೇಂದ್ರ ಬಾಬು – 9480685399
-ಬೊಮ್ಮನಹಳ್ಳಿ, ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿಯಾದ ವಿನಯ್ - 7760933913
6. ಯಲಹಂಕ ವಲಯ:
-ಯಲಹಂಕ ವಿಧಾನಸಭಾ ಕ್ಷೇತ್ರಕ್ಕೆ ದೇವರಾಜ್ – 9964530649
-ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾದ ಮುತ್ತುರಾಜ್.ಕೆ.ಪಿ - 9483139438
7. ಆರ್.ಆರ್. ನಗರ ವಲಯ:
-ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ರವೀಂದ್ರನಾಥ್ – 6361903330
-ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾದ ಜಗದೀಶ್ - 9880516322
8. ಮಹದೇವಪುರ ವಲಯ:
-ಮಹದೇವಪುರ, ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ಚಿದಾನಂದ್ - 9480685541
ನಾಗರಿಕರು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ನೇರವಾಗಿ ಸಂಪರ್ಕಿಸಿ ದೂರು ದಾಖಲಿಸಬಹುದು. ಸಾರ್ವಜನಿಕ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಬದ್ಧವಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ