ನೆಗೆಟಿವ್‌ ಇಲ್ಲದೆ ಬೆಂಗಳೂರಿಗೆ ಬಂದ್ರೆ ಕ್ವಾರಂಟೈನ್‌ ಕಡ್ಡಾಯ!

Published : Aug 04, 2021, 07:22 AM ISTUpdated : Aug 04, 2021, 07:29 AM IST
ನೆಗೆಟಿವ್‌ ಇಲ್ಲದೆ ಬೆಂಗಳೂರಿಗೆ ಬಂದ್ರೆ ಕ್ವಾರಂಟೈನ್‌ ಕಡ್ಡಾಯ!

ಸಾರಾಂಶ

* ಕೇರಳ, ಮಹಾರಾಷ್ಟ್ರ ಪ್ರಯಾಣಿಕರ ಮೇಲೆ ಕಣ್ಣು * ನೆಗೆಟಿವ್‌ ಇಲ್ಲದೆ ಬೆಂಗಳೂರಿಗೆ ಬಂದ್ರೆ ಕ್ವಾರಂಟೈನ್‌ ಕಡ್ಡಾಯ * ನಗರದ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ ವ್ಯವಸ್ಥೆ

ಬೆಂಗಳೂರು(ಆ.04): ಕೇರಳ, ಮಹಾರಾಷ್ಟ್ರ ಸೇರಿದಂತೆ ಕೋವಿಡ್‌-19 ಸೋಂಕು ಹೆಚ್ಚಿರುವ ರಾಜ್ಯಗಳಿಂದ ಬೆಂಗಳೂರಿಗೆ ಬರುವ ಕೋವಿಡ್‌ ವರದಿ ನೆಗೆಟಿವ್‌ ಇಲ್ಲದ ಪ್ರಯಾಣಿಕರನ್ನು ಇನ್ನುಮುಂದೆ ಪಾಲಿಕೆ ಅಧಿಕಾರಿಗಳು ಕ್ವಾರಂಟೈನ್‌ಗೆ ಒಳಪಡಿಸಲಿದ್ದಾರೆ.

ಗಡಿ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ವರದಿ ಕಡ್ಡಾಯ ಮಾಡಲಾಗಿದೆ. ಪ್ರಯಾಣಿಕರು 72 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಿಸಿಕೊಂಡಿರಬೇಕು. ಪರೀಕ್ಷೆ ವರದಿ ತರದ ಪ್ರಯಾಣಿಕರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿ ನೆಗೆಟಿವ್‌ ವರದಿ ಬರುವವರೆಗೂ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‌ ಆರೈಕೆ ಕೇಂದ್ರಗಳು ಮತ್ತು ನಗರದ ಕೆಲ ಖಾಸಗಿ ಹೋಟೆಲ್‌ಗಳಲ್ಲಿ ಪ್ರಯಾಣಿಕರಿಗೆ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ. ಆರ್ಥಿಕವಾಗಿ ಸಬಲರಲ್ಲದವರು ಕೋವಿಡ್‌ ಆರೈಕೆ ಕೇಂದ್ರದಲ್ಲಿ ಕ್ವಾರಂಟೈನ್‌ ಆಗಬಹುದು. ಸ್ಥಿತಿವಂತರಿಗೆ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಮಾಡಲಿದ್ದು, ಪ್ರಯಾಣಿಕರಿಗೆ ಅನುಕೂಲಕರವಾದ ದರಗಳನ್ನು ನಿಗದಿಪಡಿಸಲು ಹೋಟೆಲ್‌ ಮಾಲಿಕರ ಸಂಘದೊಂದಿಗೆ ಚರ್ಚೆ ನಡೆಸಲಾಗಿದೆ. ಬುಧವಾರ ದರ ನಿಗದಿ ಅಂತಿಮಗೊಳ್ಳಲಿದ್ದು, ದರ ಪಟ್ಟಿಪ್ರಕಟಿಸಲಾಗುವುದು ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್‌ ಗುಪ್ತಾ ತಿಳಿಸಿದ್ದಾರೆ.

ಪ್ರಯಾಣಿಕರು ಏನು ಮಾಡಬೇಕು?

ಮಹಾರಾಷ್ಟ್ರ, ಕೇರಳದಿಂದ ಬಸ್‌, ರೈಲು, ವಿಮಾನದಲ್ಲಿ ಬೆಂಗಳೂರಿಗೆ ಬರುವ ಪ್ರಯಾಣಿಕರು 72 ಗಂಟೆಯ ಒಳಗಿನ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿರಬೇಕು. ವರದಿ ತರದ ಪ್ರಯಾಣಿಕರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿ, ನೆಗೆಟಿವ್‌ ವರದಿ ಬರುವವರೆಗೂ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ