
ಬೆಂಗಳೂರು: ಇತ್ತೀಚೆಗೆ ಶಿವೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಸಂತಾಪ ಸೂಚಿಸಲು ಕರೆದಿದ್ದ ಸಭೆಯಲ್ಲಿ ಶ್ರೀಗಳ ಭಾವಚಿತ್ರದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಮಾಡಿದ ಎಡವಟ್ಟಿ ನಿಂದಾಗಿ ಬಿಬಿ ಎಂಪಿ ಮೇಯರ್ ಗಂಗಾಂಬಿಕೆ ಕ್ಷಮೆ ಕೇಳಿದ ಪ್ರಸಂಗ ನಡೆಯಿತು.
ಮಂಗ ವಾರ ಸಿದ್ಧಗಂಗಾ ಶ್ರೀಗಳಿಗೆ ಸಂತಾಪ ಸೂಚಿಸಲು ಕೆಂಪೇಗೌಡ ಪೌರ ಸಭಾಂಗಣದ ಆವರಣದಲ್ಲಿ ಶ್ರೀಗಳ ಭಾವಚಿತ್ರ ಇಡಲಾಗಿತ್ತು. ಆದರೆ, ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಶ್ರೀಗಳ ಭಾವಚಿತ್ರದ ಮೇಲೆ ‘ಅ’ ದೇವರು ನಿಮ್ಮ ಆತ್ಮಕ್ಕೆ ಶಾಂತಿ ‘ನೀಡಲ್ಲಿ’ ಎಂದು ತಪ್ಪಾಗಿ ಬರೆಯಲಾಗಿತ್ತು. ಜೊತೆಗೆ ಇಮೋಜಿ ಬಳಕೆ ಮಾಡಲಾಗಿತ್ತು.
ಅಧಿಕಾರಿ, ಸಿಬ್ಬಂದಿ ಮಾಡಿದ ಎಡವಟ್ಟು ತಿಳಿಯುತ್ತಿದ್ದಂತೆ ಮೇಯರ್ ಗಂಗಾಂಬಿಕೆ ಸರಿಪಡಿಸುವಂತೆ ಸೂಚನೆ ನೀಡಿದರು. ಅಲ್ಲದೇ ಆಗಿರುವ ತಪ್ಪಿಗೆ ಸಾಮಾನ್ಯಸಭೆಯಲ್ಲಿ ಕ್ಷಮೆ ಕೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ