ಕೊರೋನಾ ಕಾಟ: ಕಂಟೈನ್ಮೆಂಟ್‌ ಕೈಬಿಡಲು ಪ್ರಸ್ತಾವನೆ

Kannadaprabha News   | Asianet News
Published : Aug 15, 2020, 07:39 AM IST
ಕೊರೋನಾ ಕಾಟ: ಕಂಟೈನ್ಮೆಂಟ್‌ ಕೈಬಿಡಲು ಪ್ರಸ್ತಾವನೆ

ಸಾರಾಂಶ

ಪಾಲಿಕೆಯಿಂದ ಸರ್ಕಾರಕ್ಕೆ ಮನವಿ| 2 ದಿನದಲ್ಲಿ ಅಧಿಕೃತ ಆದೇಶ ನಿರೀಕ್ಷೆ| ಹಿಂದಿನ ಪದ್ಧತಿಯಿಂದ ಸೋಂಕಿತರಿಗೆ ಮುಜಗರ ಹಿನ್ನೆಲೆ, ಹೊಸ ಕ್ರಮ| ತಗಡಿನ ಶೀಟುಗಳು, ಮರದ ಪಟ್ಟಿ ಬಳಸಿ ಕಂಟೈನ್ಮೆಂಟ್‌ ಮಾಡುವುದಕ್ಕೆ ಬ್ರೇಕ್‌| ಸೋಂಕಿತರ ಮನೆಗೆ ಎಚ್ಚರಿಕೆ ಪತ್ರ ಅಂಟಿಸಿ, ಜಾಗೃತಿ ಮೂಡಿಸಲು ನಿರ್ಧಾರ| 

ಬೆಂಗಳೂರು(ಆ.15): ನಗರದಲ್ಲಿ ಕಂಟೈನ್ಮೆಂಟ್‌ ಪದ್ಧತಿ ಕೈ ಬಿಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯೊಂದಿಗೂ ಚರ್ಚಿಸಿದ್ದು, ಇನ್ನೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆಯಿದೆ ಎಂದರು.

ವೈದ್ಯರು ಕೊರೋನಾ ಚಿಕಿತ್ಸೆಗೆ ನಿರಾಕರಿಸಿದರೆ ಈ ನಂಬರ್‌ಗೆ ಕರೆ ಮಾಡಿ ಹೇಳಿ

ತಗಡಿನ ಶೀಟುಗಳು, ಮರದ ಪಟ್ಟಿಗಳನ್ನು ಬಳಸಿ ರಸ್ತೆಗಳನ್ನು ಕಂಟೈನ್ಮೆಂಟ್‌ ಮಾಡುವುದರಿಂದ ಸೋಂಕು ದೃಢಪಟ್ಟವರು ಮುಂಜುಗರಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ತಪ್ಪಿಸುವ ಉದ್ದೇಶದಿಂದ ಈ ಕಂಟೈನ್ಮೆಂಟ್‌ ಪದ್ಧತಿ ಕೈಬಿಡಲು ನಿರ್ಧರಿಸಲಾಗಿದೆ. ಇದರ ಬದಲು ಸೋಂಕಿತರ ಮನೆಗೆ ಎಚ್ಚರಿಕೆಯ ಪತ್ರ ಅಂಟಿಸಿ, ಅವರ ಸುತ್ತಮುತ್ತಲ ಮನೆಗಳಿಗೆ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

ಇದರ ನಡುವೆ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುವ ಪ್ರದೇಶಗಳಲ್ಲಿ (ಕ್ಲಸ್ಟರ್‌) ಮಾತ್ರ ಕಂಟೈನ್ಮೆಂಟ್‌ ಮಾಡುವಂತೆ ಮೇಯರ್‌ ಗೌತಮ್‌ ಕುಮಾರ್‌ ಸಲಹೆ ನೀಡಿದ್ದಾರೆ. ಹೀಗಾಗಿ ಈ ಸಲಹೆಯನ್ನೂ ರಾಜ್ಯ ಸರ್ಕಾರಕ್ಕೆ ಗಮನಕ್ಕೆ ತರಲಾಗಿದೆ ಎಂದು ಮಂಜುನಾಥ ಪ್ರಸಾದ್‌ ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!