BBMP School Scam: ಶಾಲೆಗೆ ಸರ್ಕಾರ ಕೊಟ್ಟ ದುಡ್ಡು, ಶಿಕ್ಷಕರ ಜೇಬಿಗೆ?

Published : Jun 05, 2024, 06:20 PM IST
BBMP School Scam: ಶಾಲೆಗೆ ಸರ್ಕಾರ ಕೊಟ್ಟ ದುಡ್ಡು, ಶಿಕ್ಷಕರ ಜೇಬಿಗೆ?

ಸಾರಾಂಶ

ವಾಲ್ಮೀಕಿ ಹಗರಣದ ಬಳಿಕ ಈಗ ಬಿಬಿಎಂಪಿ ಶಾಲೆಗಳಲ್ಲಿ ಗೋಲ್‌ಮಾಲ್‌ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರ ಶಾಲೆಗಳಿಗೆ ನೀಡಿದ ಹಣವನ್ನು ಶಿಕ್ಷಕರು ತಮ್ಮ ಜೇಬಿಗೆ ಇಳಿಸಿಕೊಂಡಿರುವ ಹಗರಣ ನಡೆದಿದೆ.

ಬೆಂಗಳೂರು (ಜೂ.5):  ಬಿಬಿಎಂಪಿ ಶಾಲ, ಕಾಲೇಜುಗಳಲ್ಲಿ ಬಾರಿ ಗೋಲ್‌ಮಾಲ್‌ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಮಕ್ಕಳ ಹೆಸರಲ್ಲಿ ಬಿಬಿಎಂಪಿ ಶಾಲೆಯ ಶಿಕ್ಷಕರೇ ಮಕ್ಕಳ ಹೆಸರಲ್ಲಿ ಹಣ ಲೂಟಿ ಮಾಡಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಮಕ್ಕಳ ಶೈಕ್ಷಣಿಕ ಪ್ರವಾಸ, ವಾರ್ಷಿಕೋತ್ಸವ, ಪರೀಕ್ಷೆ ವೆಚ್ಚಕ್ಕೆ ಸರ್ಕಾರ ಬಿಬಿಎಂಪಿ ಶಾಲೆಗಳಿಗೆ ಧನಸಹಾಯ ನೀಡುತ್ತದೆ. ಈ ಹಣವನ್ನು ಮಕ್ಕಳ ಹೆಸರಲ್ಲಿ ಶಾಲೆಯೆ ಶಿಕ್ಷಕರೇ ಲೂಟಿ ಮಾಡಿದ ಘಟನೆ ನಡೆದಿದೆ. ಮಕ್ಕಳ ಶೈಕ್ಷಣಿಕ ಪ್ರವಾಸ, ವಾರ್ಷಿಕೋತ್ಸವ, ಪರೀಕ್ಷೆ ವೆಚ್ಚಕ್ಕೆ ಅಂತ ಬಿಬಿಎಂಪಿಯಿಂದ ಒಂದು ಶಾಲಾ, ಕಾಲೇಜಿಗೆ ಒಂದು ಲಕ್ಷ ಹಣ ನೀಡಲಾಗಿತ್ತು. ಆದರೆ, ಈ ಶಾಲಾ ಕಾಲೇಜುಗಳ ಶಿಕ್ಷಕರು ಈ ಹಣವನ್ನು ಸೆಲ್ಫ್‌ ವಿತ್‌ಡ್ರಾ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ,  ಆರ್‌ಟಿಜಿಎಸ್‌ ಮುಖೇನ ಹಣ ನೀಡಬೇಕು. ಆದರೆ, ಪಾಲಿಕೆ ವ್ಯಾಪ್ತಿಯ 35 ಶಾಲೆಗಳಲ್ಲಿ ಶಾಲಾ, ಕಾಲೇಜು ಗಳ ಶಿಕ್ಷಕರೇ ಸೆಲ್ಫ್‌ ವಿತ್‌ಡ್ರಾ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಶಾಲಾ ಕಾಲೇಜುಗಳ ಶಿಕ್ಷಕರು ಸಲ್ಲಿಸಿದ ಬ್ಯಾಂಕ್ ಪಾಸ್ ಶೀಟ್ ಪರಿಶೀಲನೆ ಮಾಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರಣ ಕೇಳಿ ಬಿಬಿಎಂಪಿಯ ವಿಶೇಷ ಆಯುಕ್ತರು ನೋಟಿಸ್‌ ಜಾರಿ ಮಾಡಿದ್ದಾರೆ. ಹಣದ ಬಳಕೆ ಬಗ್ಗೆ ಖುದ್ದು ಹಾಜರಾಗಿ ಲಿಖಿತ ರೂಪದಲ್ಲಿ  ವಿಶೇಷ ಅಯುಕ್ತರ ಮುಂದೆ ಹೇಳಿಕೆ ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್