ಸರ್ಕಾರಿ ಭೂಮಿ ಮೇಲೆ ನಿಗಾಗೆ ‘ಬೀಟ್‌ ವ್ಯವಸ್ಥೆ’: ಸಚಿವ ಕೃಷ್ಣ ಬೈರೇಗೌಡ

Published : Jul 13, 2023, 03:00 AM IST
ಸರ್ಕಾರಿ ಭೂಮಿ ಮೇಲೆ ನಿಗಾಗೆ ‘ಬೀಟ್‌ ವ್ಯವಸ್ಥೆ’: ಸಚಿವ ಕೃಷ್ಣ ಬೈರೇಗೌಡ

ಸಾರಾಂಶ

ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಕೆಲ ಕಡೆ ತೆರವು ಮಾಡಿದ್ದ ಜಮೀನುಗಳು ಮತ್ತೆ ಕಬಳಿಕೆಯಾಗಿವೆ. ಹೀಗಾಗಿ ಇನ್ನು ಮುಂದೆ ಒತ್ತುವರಿ ತೆರವುಗೊಳಿಸಿದ ಜಮೀನುಗಳ ಬಗ್ಗೆ ನಿಗಾವಹಿಸಲು ಪೊಲೀಸರ ಬೀಟ್‌ ಮಾದರಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನು ಬಳಸಿಕೊಂಡು ಬೀಟ್‌ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ: ಸಚಿವ ಕೃಷ್ಣ ಬೈರೇಗೌಡ 

ವಿಧಾನ ಪರಿಷತ್‌(ಜು.13): ಒತ್ತುವರಿದಾರರಿಂದ ಮರುವಶಕ್ಕೆ ಪಡೆದ ಸರ್ಕಾರಿ ಜಮೀನುಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನೇ ಬಳಸಿಕೊಂಡು ‘ಬೀಟ್‌ ವ್ಯವಸ್ಥೆ’ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬುಧವಾರ ಪ್ರಶ್ನೋತ್ತರದ ವೇಳೆ ಬಿಜೆಪಿ ಸದಸ್ಯ ವೈ.ಎ.ನಾರಾಯಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಕೆಲ ಕಡೆ ತೆರವು ಮಾಡಿದ್ದ ಜಮೀನುಗಳು ಮತ್ತೆ ಕಬಳಿಕೆಯಾಗಿವೆ. ಹೀಗಾಗಿ ಇನ್ನು ಮುಂದೆ ಒತ್ತುವರಿ ತೆರವುಗೊಳಿಸಿದ ಜಮೀನುಗಳ ಬಗ್ಗೆ ನಿಗಾವಹಿಸಲು ಪೊಲೀಸರ ಬೀಟ್‌ ಮಾದರಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನು ಬಳಸಿಕೊಂಡು ಬೀಟ್‌ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಫಸಲ್‌ ಬಿಮಾ ಯೋಜನೆಗೆ ರಾಜ್ಯ ಸರ್ಕಾರ ಗುಡ್‌ಬೈ?: ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯೆ

ಸರ್ಕಾರಿ ಭೂಮಿ ಒತ್ತುವರಿ ಎಲ್ಲ ಸರ್ಕಾರಗಳ ಆಡಳಿತದ ಅವಧಿಯಲ್ಲೂ ಇತ್ತು. ಒತ್ತುವರಿ ತೆರವು ಸರ್ಕಾರದ ಇಚ್ಛಾಶಕ್ತಿಯ ಮೇಲೆ ನಡೆಯುತ್ತದೆ. ಇರುವ ಕಾನೂನುಗಳನ್ನೇ ಬಳಸಿಕೊಂಡು ವ್ಯವಸ್ಥಿತವಾಗಿ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿ ತಿಂಗಳು ಒತ್ತುವರಿ ತೆರವು ಅಭಿಯಾನ ನಡೆಸಲಾಗುವುದು. ಅಧಿಕಾರಿಗಳಿಗೆ ಗುರಿ ನಿಗದಿ ಪಡಿಸಿ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿರುವ ಸರ್ಕಾರಿ ಜಮೀನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 14,660 ಪ್ರಕರಣಗಳಲ್ಲಿ 38,947 ಎಕರೆ ಸರ್ಕಾರಿ ಜಮೀನು ಕಬಳಿಕೆಯಾಗಿದೆ. ಈ ಪೈಕಿ 1,292 ಪ್ರಕರಣಗಳಲ್ಲಿ 3,898 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 1,292 ಪ್ರಕರಣಗಳಲ್ಲಿ 3,898 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಇದರಲ್ಲಿ 376 ಪ್ರಕರಣಗಳಲ್ಲಿ 3,249 ಎಕರೆ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ವೇಳೆ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಿ ಜಮೀನು ಒತ್ತುವರಿ ಪ್ರಕರಣಗಳಲ್ಲಿ ಸರ್ಕಾರದಿಂದ ನೇಮಕವಾಗುವ ವಕೀಲರೇ ಭೂಗಳ್ಳರ ಪರ ಕೆಲಸ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗೆ ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್‌ ಜತೆ ಚರ್ಚಿಸಿದ್ದೇನೆ. ಈ ಬಗ್ಗೆಯೂ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳ್ತಂಗಡಿ ಬಾಲಕ ಸುಮಂತ್ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್ : ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ