
ಬೆಳಗಾವಿ: ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಿಂದೆ ನೀಡಿದ್ದ ವಾಗ್ದಾನದಂತೆಯೇ ಇದೀಗ ಬೆಳಗಾವಿಯಲ್ಲಿ ಮನೆ ಮಾಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಚ್.ಡಿ.ಕುಮಾರಸ್ವಾಮಿ ಬಡಾವಣೆಯ ಪ್ರಥಮ ಮುಖ್ಯರಸ್ತೆ, 3ನೇ ತಿರುವಿನಲ್ಲಿರುವ ಮನೆಯನ್ನು ಬಾಡಿಗೆ ಪಡೆದಿದ್ದಾರೆ.
ಯುಗಾದಿ ಹಬ್ಬದ ದಿನ, ಮಂಗಳವಾರದಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಶೆಟ್ಟರ್ ಅವರು ಗೃಹ ಪ್ರವೇಶ ಮಾಡಿದರು. ಶೆಟ್ಟರ್ ಹೊರಗಿನವರು, ಅವರು ತಮ್ಮ ಸ್ಥಳೀಯ ವಿಳಾಸ ಹೇಳಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಚುನಾವಣಾ ಪ್ರಚಾರದ ವೇಳೆ ಸವಾಲು ಹಾಕಿದ ಬೆನ್ನಲ್ಲೇ ಅವರ ಕ್ಷೇತ್ರದಲ್ಲೇ ಮನೆ ಮಾಡುವ ಮೂಲಕ ಶೆಟ್ಟರ್ ತಿರುಗೇಟು ನೀಡಿದಂತಾಗಿದೆ.
ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಎಲ್ಲೂ ಕಾಣಿಸ್ತಿಲ್ಲ: ಸತೀಶ ಜಾರಕಿಹೊಳಿ
ಮನೆಯಲ್ಲಿ ಪೂಜಾ ಕೈಂಕರ್ಯದ ಬಳಿಕ ಹಾಲು ಉಕ್ಕಿಸುವ ಶಾಸ್ತ್ರವೂ ನಡೆಯಿತು. ಈ ವೇಳೆ, ಸಂಸದೆ ಮಂಗಲ ಅಂಗಡಿ, ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ, ಸೊಸೆ ಶ್ರದ್ಧಾ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮಾತನಾಡಿ, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಾನು ಗೃಹ ಪ್ರವೇಶ ಮಾಡಿದ್ದೇನೆ. ಬೆಳಗಾವಿಯಲ್ಲಿ ನಾನು ಕಚೇರಿಯನ್ನೂ ತೆರೆಯುತ್ತೇನೆ. ನಮ್ಮ ಕಾರ್ಯಕರ್ತರಿಗೆ ವಾಗ್ದಾನ ಮಾಡಿದಂತೆ ಮನೆ ಮಾಡಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ