ಬೆಳಗಾವಿಯಲ್ಲಿ ಹೆಚ್ಚಾಯ್ತು ಮರಾಠಿಗರ ಪುಂಡಾಟ: ಕನ್ನಡ ಬಾವುಟ ಹಾರಿಸಿದ ಕನ್ನಡಿಗರ ಮೇಲೆ ಹಲ್ಲೆ!

Published : Dec 20, 2023, 02:46 PM IST
ಬೆಳಗಾವಿಯಲ್ಲಿ ಹೆಚ್ಚಾಯ್ತು ಮರಾಠಿಗರ ಪುಂಡಾಟ: ಕನ್ನಡ ಬಾವುಟ ಹಾರಿಸಿದ ಕನ್ನಡಿಗರ ಮೇಲೆ ಹಲ್ಲೆ!

ಸಾರಾಂಶ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಕನ್ನಡದ ಧ್ವಜ ಅಳವಡಿಕೆ ಮಾಡಿದ ಯುವಕನ ಮೇಲೆ ಮರಾಠಿಗರು ಗುಂಪು ಮನಸೋ ಇಚ್ಛೆ ಹಲ್ಲೆ ಮಾಡಿದೆ.

ಬೆಳಗಾವಿ (ಡಿ.20): ಕರ್ನಾಟಕದಲ್ಲಿ ಕನ್ನಡ ಭಾಷೆ ಮತ್ತು ಕನ್ನಡಿಗನೇ ಸಾರ್ವಭೌಮ ಎಂದು ಸಿನಿಮಾ ಡೈಲಾಗ್ ಮತ್ತು ಕನ್ನಡಪರ ಹೋರಾಟಗಾರರ ಭಾಷಣಕ್ಕೆ ಮಾತ್ರ ಸೀಮಿತವಾಗಿದೆ. ಆದರೆ, ಬೆಳಗಾವಿಯಲ್ಲಿ ಕನ್ನಡದ ಧ್ವಜವನ್ನು ಹಾರಿಸಿದ ಕನ್ನಡಿಗರ ಮೇಲೆ ಮರಾಠಿಗರ ದೌರ್ಜನ್ಯ ನಡೆಯುತ್ತಲೇ ಇದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಕನ್ನಡದ ಧ್ವಜ ಅಳವಡಿಕೆ ಮಾಡಿದ ಯುವಕನ ಮೇಲೆ ಮರಾಠಿ ಸಮುದಾಯದ ಹಲವರು ಗುಂಪು ಕಟ್ಟಿಕೊಂಡು ಗ್ರಾಮ ಪಂಚಾಯಿತಿ ಎದುರಲ್ಲೇ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕರ್ನಾಟಕದಲ್ಲಿ ನವೆಂಬರ್‌ ತಿಂಗಳು ಮಾತ್ರ ಕನ್ನಡ ರಾಜ್ಯೋತ್ಸವವನ್ನು ಹೆಚ್ಚಾಗಿ ಆಚರಣೆ ಮಾಡುವ ಮೂಲಕ ನಾವು ಕನ್ನಡಿಗರು ಎಂಬ ದರ್ಪವನ್ನು ಮರೆಯುವುದಕ್ಕೆ ಕಡಿಮೆಯೇನಿಲ್ಲ. ಆದರೆ, ಕನ್ನಡಕ್ಕೆ ಅಥವಾ ಕನ್ನಡಿಗರಿಗೆ ಅನೇಕ ಸ್ಥಳಗಳಲ್ಲಿ ಕುತ್ತು ಬಂದಿದೆ ಎಂಬುದು ಗೊತ್ತಿದ್ದರೂ ತಾತ್ಕಾಲಿಕ ಹೋರಾಟ ಮಾಡಿ ಸುಮ್ಮನೆ ಕುಳಿತುಕೊಳ್ಳುತ್ತೇವೆ. ಇದರಿಂದ ಕನ್ನಡಿಗರ ಮೇಲೆ ಕನ್ನಡ ನಾಡು, ನುಡಿಗೆ ಸಂಬಂಧಪಟ್ಟಂತೆಯೇ ಅನ್ಯ ಭಾಷಿಕರ ಹಲ್ಲೆ ಘಟನೆಗಳು ಹೆಚ್ಚಾಗುತ್ತಿವೆ.

ಪಿಎಸ್‌ಐ, ಎಫ್‌ಡಿಎ ಪರೀಕ್ಷೆ ನಕಲು ಕಿಂಗ್‌ಪಿನ್‌ ಆರ್.ಡಿ.ಪಾಟೀಲ್ ಮೇಲೆ ಕೋಕಾ ಜಾರಿ: ಇನ್ಮೇಲೆ ಬೇಲ್ ಸಿಗೋದೇ ಇಲ್ಲ!

ಇದೇ ರೀತಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಅಳವಡಿಸಿದ್ದ ಕನ್ನಡ ಧ್ವಜ ತೆರವು ಮಾಡುವಂತೆ ಕನ್ನಡಿಗ ಯುವಕನನ್ನ ಮರಾಠಿ ಪುಂಡರು ಥಳಿಸಿ ವಿಕೃತಿ ಮೆರೆದಿದ್ದಾರೆ. ಕರ್ನಾಟಕದಲ್ಲಿಯೇ ಕನ್ನಡಿಗರ ಮೇಲೆ ಅನ್ಯ ಭಾಷಿಕರು ದೌರ್ಜನ್ಯ ಮಾಡುತ್ತಿದ್ದಾರೆ. ಇನ್ನು ಘಟನೆಗೆ ಬರುವುದಾದರೆ ಅಂಕಲಿ ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿ ಕನ್ನಡ ಧ್ವಜವನ್ನು ಅಳವಡಿಕೆ ಮಾಡಲಾಗಿತ್ತು. ಆದರೆ, ಮರಾಠಿಗರು ನೀವು ಕನ್ನಡ ಧ್ವಜವನ್ನು ಏಕೆ ಹಾಕಿದ್ದೀರಿ, ಅಲ್ಲಿ ಕೇಸರಿ ಬಾವುಟ ಮಾತ್ರ ಇರಬೇಕು ಎಂದು ಕನ್ನಡಿಗರೊಂದಿಗೆ ಜಗಳ ಆರಂಭಿಸಿದ್ದಾರೆ. ಇದೇ ವೇಳೆ ಸ್ಥಳದಲ್ಲಿದ್ದ ಕೆಲ ಮರಾಠಾ ಸಮುದಾಯದ ಕಿಡಿಗೇಡಿಗಳಿಂದ  ಕನ್ನಡಿಗರ ಮೇಲೆ ಹಲ್ಲೆ ಮಾಡಲಾಗಿದ್ದು, ಈಗ ಇದರ ವಿಡಿಯೋ ವೈರಲ್ ಆಗಿದೆ. 

‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್‌ ತಡೆ

ಈ ಘಟನೆಗೆ ಸಂಬಂಧಪಟ್ಟಂತೆ ಐದು ಜನ ಮರಾಠಿ ಪುಂಡರ ವಿರುದ್ದ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಬಾಕಿ ನಾಲ್ಕು ಜನರು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯವನ್ನು ಆರಂಭಿಸಿದ್ದಾರೆ. ಆದರೆ, ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮ ಎನ್ನುವುದು ಭಾಷಣಕ್ಕೆ ಮಾತ್ರ ಸೀಮಿತ ಆಗುತ್ತಿದೆ ಎನ್ನುವುದು ಇಲ್ಲಿ ಕಂಡುಬರುತ್ತಿದೆ. ಇನ್ನು ಸರ್ಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಕ್ಕೆ ಮುಂದಾಗಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!