ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿ ಅರೆಸ್ಟ್ ಮಾಡಿ, ಎತ್ಹಾಕೊಂಡು ಹೋದ ಪೊಲೀಸರು!

Published : Dec 19, 2024, 07:05 PM ISTUpdated : Dec 19, 2024, 07:30 PM IST
ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿ ಅರೆಸ್ಟ್ ಮಾಡಿ, ಎತ್ಹಾಕೊಂಡು ಹೋದ ಪೊಲೀಸರು!

ಸಾರಾಂಶ

ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಿಎನ್‌ಎಸ್ ೭೫ ಮತ್ತು ೭೯ ರಡಿ ಪ್ರಕರಣ ದಾಖಲಾಗಿದೆ. ಪ್ರತಿಭಟನೆ ವೇಳೆ ಸಿ.ಟಿ. ರವಿ ಅವರನ್ನು ಬಂಧಿಸಲಾಯಿತು.

ಬೆಳಗಾವಿ (ಡಿ.19):  ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ  ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಕ್ಷೇಪಾರ್ಹ (ವೇ*) ಪದ ಬಳಕೆ ಮಾಡಿದ ಬೆನ್ನಲ್ಲಿಯೇ ಹಿರೇಬಾಗೇವಾಡಿಯಲ್ಲಿ ದೂರು ದಾಖಲಿಸಲಾಗಿತ್ತು. ಇದರ ಬೆನ್ನಲ್ಲಿಯೇ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಸುವರ್ಣ ಸೌಧದಲ್ಲಿದ್ದ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ.

ಬೆಳಗಾವಿ ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲು ಆಗಿತ್ತು. BNS 75 ಮತ್ತು 79ರಡಿ ಕೇಸ್ ದಾಖಲು ಆಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ ದೂರಿನ್ವಯ ಮಹಿಳೆಯರು ವಿರುದ್ಧ ಅವಾಚ್ಚ ಶಬ್ದ ಬಳಕೆ ಆರೋಪದಡಿ ಕೇಸ್ ದಾಖಲಿಸಲಾಗಿತ್ತು. ಇದೀಗ ಸುವರ್ಣ ಸೌಧದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳದಿಂದ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿಗೆ ಕಾಲಿಂದ ಒದ್ದು, ಹಲ್ಲೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು!

ಬೆಳಗಾವಿಯ ಹೊರೇಬಾಗೇವಾಡಿಯ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧನ ಮಾಡಲು ಬರುತ್ತಿದ್ದಂತೆಯೇ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಸುವರ್ಣ ಸೌಧದ ಮೆಟ್ಟಿಲ ಮೇಲೆ ದೊಡ್ಡ ಹೈಡ್ರಾಮ ನಡೆಯಿತು. ಈ ವೇಳೆ ಸಿ.ಟಿ. ರವಿ ಅವರನ್ನು ಮುಲಾಜಿಲ್ಲದೇ ಮೇಲೆತ್ತಿಕೊಂಡ ಪೊಲೀಸರು ಬಿಗಿ ಭದ್ರತೆ ನಡುಗೆ ಪೊಲೀಸ್ ವಾಹನಕ್ಕೆ ತುಂಬಿಕೊಂಡು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ಹಾಗೂ ಸಿ.ಟಿ. ರವಿ ಅವರು ಜೈಭೀಮ್ ಘೋಷಣೆ ಹಾಗೂ ಅಂಬೇಡ್ಕರ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬಿಜೆಪಿ ನಾಯಕರಿಗೆ ರಕ್ಷಣೆ ನೀಡದ ಸರ್ಕಾರ ಎಂದು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಬಿಜೆಪಿ ನಾಯಕರು ಪೊಲೀಸರ ವಾಹನಕ್ಕೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಇದಾದ ನಂತರ ಪೊಲೀಸರು ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ತಳ್ಳಿ ಸಿ.ಟಿ. ರವಿ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಘಟನೆಯ ಹಿನ್ನೆಲೆಯೇನು?
ಬೆಳಗಾವಿಯ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಬಂದಿದ್ದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರಿಬ್ಬರೂ ಕೇಂದ್ರದಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಬಾವಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಕೂಡ ಅವರ ಕಾಂಗ್ರೆಸ್ ವಿರುದ್ಧವೇ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರು ಅಲ್ಲಿಯೇ ಇದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣೀರಿಡುತ್ತಾ ಪರಿಷತ್ ಸಭೆಯಿಂದ ಹೊರಗೆ ಹೋಗಿದ್ದು, ಸಭಾಪತಿಗೆ ದೂರು ನೀಡಿದ್ದರು. ಇದರ ನಂತರ ಹಿರೇ ಬಾಗೇವಾಡಿ ಪೊಲೀಸ್ ಠಾಣೆಗೂ ದೂರು ನೀಡಿದ್ದು, ಇದೀಗ ಸಿ.ಟಿ. ರವಿ ಪೊಲೀಸರ ಅತಿಥಿಯಾಗಿದ್ದಾರೆ.

ಇದನ್ನೂ ಓದಿ: ಲಕ್ಷ್ಮೀಗೆ ವೇ* ಎಂದ ಸಿ.ಟಿ. ರವಿಗೆ ಪರಿಷತ್ ಹೊರಗೆ ಹಲ್ಲೆ, ಒಳಗಡೆ ತಾಯಿ, ಮಗಳು, ಹೆಂಡ್ತಿ ಬಗ್ಗೆ ಬೈಗುಳ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!