ಫ್ಯಾಕ್ಟರಿಯಲ್ಲಿ ಸಕ್ಕರೆ, ಕೆರೆಯಲ್ಲಿ ವಿಷ: ರೈತರ ಅನ್ನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕನ್ನ!

Suvarna News   | Asianet News
Published : Feb 11, 2021, 09:54 AM ISTUpdated : Feb 11, 2021, 11:15 AM IST
ಫ್ಯಾಕ್ಟರಿಯಲ್ಲಿ ಸಕ್ಕರೆ, ಕೆರೆಯಲ್ಲಿ ವಿಷ: ರೈತರ ಅನ್ನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕನ್ನ!

ಸಾರಾಂಶ

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷ ಶುಗರ್ ಫ್ಯಾಕ್ಟರಿಯಿಂದ ಹೊರಬರುವ ಕೆಮಿಕಲ್ ಮಿಶ್ರಿತ ತ್ಯಾಜ್ಯವನ್ನು ಪಕ್ಕದಲ್ಲೇ ಇರುವ ತುಬ್ಬರಿಹಳ್ಳಕ್ಕೆ ಬಿಡಲಾಗುತ್ತಿದೆ. ಇದರಿಂದ ಆ ಹಳ್ಳದಲ್ಲಿರುವ ಮೀನುಗಳ ಮಾರಣ ಹೋಮವಾಗುತ್ತಿದೆ. 

ಬೆಳಗಾವಿ (ಫೆ. 11):  ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷ ಶುಗರ್ ಫ್ಯಾಕ್ಟರಿಯಿಂದ ಹೊರಬರುವ ಕೆಮಿಕಲ್ ಮಿಶ್ರಿತ ತ್ಯಾಜ್ಯವನ್ನು ಪಕ್ಕದಲ್ಲೇ ಇರುವ ತುಬ್ಬರಿಹಳ್ಳಕ್ಕೆ ಬಿಡಲಾಗುತ್ತಿದೆ. ಇದರಿಂದ ಆ ಹಳ್ಳದಲ್ಲಿರುವ ಮೀನುಗಳ ಮಾರಣ ಹೋಮವಾಗುತ್ತಿದೆ. ಈ ಕೆರೆಯ ನೀರನ್ನು ಕೃಷಿಗೆ ಬಳಸುವ ಅಕ್ಕಪಕ್ಕದ ಗ್ರಾಮದ ಜನ ಕಂಗಾಲಾಗಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಸಾಕಷ್ಟು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. 

ತುಬ್ಬರಿಹಳ್ಳದ ಈ ನೀರು ಇಲ್ಲಿನ ಜನರಿಗೆ ಕೃಷಿಗೆ ಆಧಾರ. ಕಲುಷಿತ ನೀರಿನಿಂದ ಬೆಳೆಗಳು ನಾಶವಾಗುತ್ತಿದೆ. ನೀರು ಕುಡಿದ ಜಾನುವಾರುಗಳು ಕಾಯಿಲೆಗೆ ತುತ್ತಾಗುತ್ತಿವೆ. ಯಾವಾಗಲೂ ರಾಜಖಾರಣದಲ್ಲಿ ಸದ್ದು ಮಾಡುವ ಲಕ್ಷ್ಮೀ ಹೆಬ್ಬಾಳ್ಕರ್ ಇಲ್ಲಿ ತಮ್ಮ ಕ್ಷೇತ್ರದ ಜನರ ಸಮಸ್ಯೆಗೆ ಮಾತ್ರ ಜಾಣ ಕುರುಡು ತೋರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!