CRPF ಕೋಬ್ರಾ ಕಮಾಂಡೋ ಬಂಧನ: ಕೊನೆಗೂ ಇನ್ಸ್‌ಪೆಕ್ಟರ್ ತಲೆದಂಡ

Published : Apr 29, 2020, 09:11 PM IST
CRPF ಕೋಬ್ರಾ ಕಮಾಂಡೋ ಬಂಧನ: ಕೊನೆಗೂ ಇನ್ಸ್‌ಪೆಕ್ಟರ್ ತಲೆದಂಡ

ಸಾರಾಂಶ

CRPF ಕೋಬ್ರಾ ಕಮಾಂಡೋ ಸಚಿನ್ ಸಾವಂತ್ ಹಾಗೂ ಪೇದೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ ಪೆಕ್ಟರ್‌ ಅನ್ನು ಅಮಾನತ್ತು ಮಾಡಲಾಗಿದೆ.

ಬೆಳಗಾವಿ, (ಏ.29): ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ವಿರುದ್ಧ ಪ್ರಕರಣ ದಾಖಲಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದಕ್ಕೆ ಸಬ್ ಇನ್ಸ್‌ಪೆಕ್ಟರ್‌ನನ್ನು ಸಸ್ಪೆಂಡ್ ಮಾಡಲಾಗಿದೆ.

ಯೋಧನ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಸದಲಗಾ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್‌ ಅವರನ್ನು ತಲೆದಂಡ ಮಾಡಲಾಗಿದೆ.

ಯೋಧನಿಗೆ ಬಾಸುಂಡೆ ಬರುವಂತೆ ಥಳಿತ: ಬಸವರಾಜ್‌ ಬೊಮ್ಮಾಯಿ ರಾಜೀನಾಮೆಗೆ ಅಭಿಯಾನ..!

ಇನ್ಸ್‌ಪೆಕ್ಟರ್ ಅನಿಲ್ ಕುಮಾರ್‌ ಅವರನ್ನು ಅಮಾನತು ಮಾಡಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಇಂದು (ಬುಧವಾರ) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆ
ಮನೆ ಮುಂದೆ ಬೈಕ್ ತೊಳೆಯುತ್ತಿದ್ದ ಯೋಧ ಸಚಿನ್ ಸಾವಂತ್ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ಪ್ರಶ್ನಿಸಿದ್ದರು. ಈ ವೇಳೆ ಮಾತಿನ ಚಕಮಿಕಿ ನಡೆದು ನಂತರ ಪೊಲೀಸರು ಹಲ್ಲೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಯೋಧ ಸಹ ಹೊಡೆದಿದ್ದರು. ಈ ಸಂಬಂಧ ಬೆಳಗಾವಿ ಪೊಲೀಸರು ಸಚಿನ್ ರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದರು. 

ಇದಾದ ಐದು ದಿನಗಳ ನಂತರ ಸಚಿನ್ ಅವರಿಗೆ ಜಾಮೀನು ಸಿಕ್ಕಿತ್ತು. ಅದಕ್ಕೆ ಕಾರಣ ಯೋಧನ ಕೈಗೆ ಕೋಳ ತೊಡಿಸಿ ಜೈಲಿನಲ್ಲಿ ಕೂರಿಸಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದೇ ವೇಳೆ ಪೊಲೀಸರು ಕ್ರಮವನ್ನು ತೀವ್ರವಾಗಿ ಖಂಡಿಸಲಾಗಿತ್ತು.

ಕಮಾಂಡೋ-ಪೊಲೀಸ್‌ ಜಟಾಪಟಿ ಕೇಸ್‌: CRPF ಯೋಧನಿಗೆ ಷರತ್ತುಬದ್ಧ ಜಾಮೀನು 

ಇದೀಗ ಜಾಮೀನು ಪಡೆದು ಹೊರಬಂದಿರುವ ಸಚಿನ್ ಅವರನ್ನು ಠಾಣೆಯಲ್ಲಿ ಬಾಸುಂಡೆ ಬರುವಂತೆ ಅಮಾನುಷವಾಗಿ ಥಳಿಸಲಾಗಿದೆ ಎಂಬ ಪೋಸ್ಟ್ ವೊಂದು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಪೊಲೀಸರ ನಡೆಗೆ ಆಕ್ರೊಶ ವ್ಯಕ್ತವಾಗುತ್ತಿದ್ದು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಟ್ವಿಟ್ಟರ್‌ನಲ್ಲಿ ಅಭಿಯಾನ ಶುರುವಾಗಿದೆ.

ಇದು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸದಲಾ ಠಾಣೆಯ ಇನ್ಸ್‌ಪೆಕ್ಟರ್‌ನ್ನು ಸಸ್ಪೆಂಡ್ ಮಾಡಿ ಕೈತೊಳೆದುಕೊಳ್ಳಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್