'ವಾಪಸ್ ಮನೆಗೆ ಹೋಗೋಕೂ ಆಗ್ತಿಲ್ಲ..' ಗ್ಯಾಸ್‌ ಸಿಗದೆ ನಿಂತಲ್ಲೇ ನಿಂತ ಆಟೋಗಳು; ಬಂಕ್‌ ಮುಂದೆ 3ನೇ ದಿನವೂ ಕಿ.ಮೀ.ಗಟ್ಟಲೆ ಕ್ಯೂ!

Kannadaprabha News   | Kannada Prabha
Published : Apr 04, 2026, 04:42 AM IST
Bengaluru Auto gas shortage drivers sleep in queues waiting for LPG

ಸಾರಾಂಶ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಆಟೋ ಗ್ಯಾಸ್ ಕೊರತೆ ತೀವ್ರಗೊಂಡಿದೆ. ಗ್ಯಾಸ್‌ಗಾಗಿ ಚಾಲಕರು ಗಂಟೆಗಟ್ಟಲೆ ಕಾಯುತ್ತಿದ್ದು, ಈ ಸಂಕಷ್ಟದಿಂದಾಗಿ ಆಟೋ ಪ್ರಯಾಣ ದರವನ್ನು ಶೇ.10ರಷ್ಟು ಹೆಚ್ಚಿಸಿ ಗ್ರಾಹಕರಲ್ಲಿ ಮನವಿ ಮಾಡುತ್ತಿದ್ದಾರೆ.

 ಬೆಂಗಳೂರು (ಏ.4) ಮಧ್ಯಪ್ರಾಚ್ಯ ಯುದ್ಧದಿಂದಾಗಿ ಪೂರೈಕೆ ವ್ಯತ್ಯಯ ಉಂಟಾಗಿ ಆಟೋ ರಿಕ್ಷಾಗಳ ಗ್ಯಾಸ್‌ಗೆ ತೀವ್ರ ಸಮಸ್ಯೆ ಮುಂದುವರಿದಿದೆ. ಗ್ಯಾಸ್‌ ಬಂಕ್‌ಗಳ ಮುಂದೆ ಆಟೋಗಳ ಸರದಿ ಸಾಲು ಇನ್ನೂ ಮುಂದುವರಿದಿದೆ.

ಗ್ಯಾಸ್‌ ಲಭ್ಯವಿರುವ ಬಂಕ್‌ಗಳಲ್ಲಿ ಆಟೋಗಳಿಗೆ ಗ್ಯಾಸ್‌ ಮಿತಿ ಹೇರಲಾಗಿದೆ. ಗ್ಯಾಸ್‌ ಸಿಗದೆ ಬದುಕು ನಡೆಸುವುದು ದುಸ್ತರ ಎಂದು ಆಟೋ ಚಾಲಕರು ಅಳಲು ತೊಡಿಕೊಂಡಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರವನ್ನು ಶೇ.10ರಷ್ಟು ಹೆಚ್ಚಿಸಿರುವ ಆಟೋ ಚಾಲಕರು, ಹೆಚ್ಚುವರಿ ಹಣವನ್ನು ನೀಡುವಂತೆ ಗ್ರಾಹಕರಲ್ಲಿ ಮನವಿ ಮಾಡುತ್ತಿದ್ದಾರೆ.

ಬೆಂಗಳೂರು, ಮೈಸೂರು, ತುಮಕೂರು, ರಾಯಚೂರು, ರಾಮನಗರ ಸೇರಿದಂತೆ ಹಲವು ನಗರಗಳಲ್ಲಿ ಆಟೋ ಗ್ಯಾಸ್‌ ಸಿಗುತ್ತಿಲ್ಲ. ಗ್ಯಾಸ್‌ಗಾಗಿ ಆಟೋಗಳು ಬಂಕ್‌ಗಳ ಮುಂದೆ ಕಿಲೋ ಮೀಟರ್‌ಗಟ್ಟಲೇ ನಿಲ್ಲುತ್ತಿವೆ.

ಆಟೋಗಳಿಗೆ ಗ್ಯಾಸ್‌ ತುಂಬಿಸಿಕೊಳ್ಳಲು ಚಾಲಕರು ನಾಲ್ಕೈದು ತಾಸು ಕಾಯುವಂತಾಗಿದೆ. ಅರ್ಧಕ್ಕರ್ಧ ಆಟೋ ಗ್ಯಾಸ್‌ ಬಂಕ್‌ಗಳು ‘ನೋ ಸ್ಟಾಕ್‌’ ಬೋರ್ಡ್‌ ಹಾಕಿವೆ. ತುಮಕೂರಿನ 8 ಬಂಕ್‌ಗಳಲ್ಲಿ 6 ಬಂಕ್‌ಗಳು ಬಾಗಿಲು ಮುಚ್ಚಿವೆ. ಇನ್ನು ರಾಮನಗರದಲ್ಲಿ ಒಂದು ಬಂಕ್‌ 2 ದಿನದಿಂದ ಬಂದ್‌ ಆಗಿದೆ. ಮೈಸೂರಿನಲ್ಲಿ ಬಹುತೇಕ ಬಂಕ್‌ಗಳು ಬಂದ್‌ ಆಗಿವೆ. ಕೆಲ ಆಟೋ ಚಾಲಕರು ಬಂಕ್‌ಗಳಿಗೆ ಬಂದು ಗ್ಯಾಸ್ ಸಿಗದೆ, ಆಟೋವನ್ನೂ ವಾಪಸ್‌ ತೆಗೆದುಕೊಂಡು ಹೋಗಲು ಆಗದೆ ಬಂಕ್‌ಗಳ ಬಳಿಯೇ ಆಟೋ ಪಾರ್ಕ್‌ ಮಾಡಿ ಹೋಗುತ್ತಿದ್ದಾರೆ.

ಆಟೋ ದರ ಏರಿಕೆ:

ಬೆಂಗಳೂರಿನಲ್ಲಿ ಆಟೋ ಗ್ಯಾಸ್‌ ಸಿಗುತ್ತಿಲ್ಲ. ಇರುವ ಬಂಕ್‌ಗಳಲ್ಲಿ ಪ್ರತಿ ಆಟೋಗೆ ₹400 ಮೌಲ್ಯದ ಗ್ಯಾಸ್ ಮಾತ್ರ ತುಂಬಿಸುವುದಾಗಿ ಬಂಕ್‌ಗಳಲ್ಲಿ ಬ್ಯಾನರ್‌ ಅಳವಡಿಸಲಾಗಿದ್ದು, ಚಾಲಕರು ಸಹಕರಿಸುವಂತೆ ಮನವಿ ಮಾಡಲಾಗಿದೆ. ಇನ್ನು ಗ್ಯಾಸ್‌ ದೊರೆಯದೆ ಸಮಸ್ಯೆ ಆಗಿರುವುದು ಹಾಗೂ ಸಿಗುವ ಗ್ಯಾಸ್‌ನ ದರ ಏರಿಕೆ ಆಗಿರುವುದರಿಂದ ಆಟೋ ಚಾಲಕರು ಆಟೋ ಪ್ರಯಾಣಿಕ ದರವನ್ನು ಏರಿಸಿದ್ದಾರೆ. ಶೇಕಡ 10 ಹೆಚ್ಚುವರಿ ಹಣ ನೀಡುವಂತೆ ಚಾಲಕರು ಆಟೋಗಳಲ್ಲಿ ಬೋರ್ಡ್‌ ಹಾಕಿಕೊಂಡಿದ್ದಾರೆ. ಇನ್ನು ಕೆಲವರು ವಿಷಯವನ್ನು ನೇರವಾಗಿ ಗ್ರಾಹಕರಿಗೆ ಹೇಳಿ ಹಣ ಪಡೆಯುತ್ತಿದ್ದಾರೆ.

ಗ್ಯಾಸ್‌ ಸಿಗದೆ ಬದುಕು ನಡೆಸುವುದು ಕಷ್ಟ. ಗ್ಯಾಸ್‌ ಇಲ್ಲದೆ ಆಟೋ ಓಡಿಸಲು ಆಗುತ್ತಿಲ್ಲ. ಹಣ ಇಲ್ಲದೆ ಬದುಕು ಸಾಗಿಸಲು ಆಗುತ್ತಿಲ್ಲ. ಬೇರೆ ಕೆಲಸ ನೋಡಿಕೊಳ್ಳುವುದೇ ಸೂಕ್ತ ಎಂದು ಆಟೋ ಚಾಲಕರು ಅಳಲು ತೋಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನ್ಯಾ. ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ 'ಹೆಲ್ತ್ ಬುಲೆಟಿನ್' ಬಿಡುಗಡೆ; ವೈದ್ಯರು ಹೇಳಿದ್ದೇನು?
ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ವೇದಿಕೆ ಮೇಲೆಯೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ!