
ಜೈಸಲ್ಮೇರ್(ಜ.16): ಬೆಂಗಳೂರಿನ ಖ್ಯಾತ ಕ್ರಾಸ್ಕಂಟ್ರಿ ಬೈಕರ್, ಕಿಂಗ್ ರಿಚರ್ಡ್ ಶ್ರೀನಿವಾಸನ್ ರಾಜಸ್ಥಾನದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಏಕಾಏಕಿ ರಸ್ತೆಗೆ ಅಡ್ಡಬಂದ ಒಂಟೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಾವು ಓಡಿಸುತ್ತಿದ್ದ ಬಿಎಂಡಬ್ಲ್ಯು ಜಿಎಸ್ ಬೈಕ್ನಿಂದ ಆಯತಪ್ಪಿ ಕೆಳಗೆ ಉರುಳಿಬಿದ್ದು ಅವರು ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಜೈಸಲ್ಮೇರ್ಗೆ 8000 ಕಿ.ಮೀ ದೂರದ ಬೈಕ್ ರೈಡಿಂಗ್ ವೇಳೆ ಈ ಅಪಘಾತ ಸಂಭವಿಸಿದೆ. ಜ.7ರಂದಷ್ಟೇ ಶ್ರೀನಿವಾಸನ್ ಅವರು ಬೆಂಗಳೂರಿನಿಂದ ತೆರಳಿದ್ದರು. ಅವರ ಈ ಸಾಹಸದ ವೇಳೆ ಬೆಂಗಳೂರಿನವರೇ ಆದ ನಾರಾಯಣನ್, ಚೆನ್ನೈನ ಡಾ. ವಿಜಯ್ ಮತ್ತು ವೇಣುಗೋಪಾಲ್ ಕೂಡಾ ಇದ್ದರು.
ಜ.22ಕ್ಕೆ ಬಂದ್ಗೆ ಕರೆ ನೀಡಿದ ಬೆಂಗಳೂರು ಮುಸ್ಲಿಂ ಸಂಘಟನೆ!
ಶ್ರೀನಿವಾಸನ್ ಅವರು ತಮ್ಮ ಬೈಕ್ ರೈಡಿಂಗ್ ಇತಿಹಾಸದಲ್ಲಿ ಇದುವರೆಗೆ 5 ಖಂಡಗಳ, 37 ದೇಶಗಳಲ್ಲಿ 65000 ಕಿ.ಮೀ ಸಂಚರಿಸಿದ ದಾಖಲೆ ಹೊಂದಿದ್ದಾರೆ. 2018ರಲ್ಲಿ ಶ್ರೀನಿವಾಸನ್ ಅವರು ಬೆಂಗಳೂರಿನಿಂದ ಲಂಡನ್ಗೆ, 2019ರಲ್ಲಿ ಉತ್ತರ ಮತ್ತು ದಕ್ಷಿಣ ಅಮೆರಿಕಕ್ಕೆ ಬೈಕನಲ್ಲೇ ಪ್ರಯಾಣ ಕೈಗೊಂಡಿದ್ದರು. ವಿಶ್ವದ ಎಲ್ಲಾ ದೇಶಗಳಿಗೆ ಬೈಕ್ನಲ್ಲೇ ಭೇಟಿ ನೀಡುವ ಕನಸು ತಮ್ಮದು ಎಂದು ಹಿಂದೊಮ್ಮೆ ಹೇಳಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ