ತಿರುಪತಿ ತಿರುಮಲ ಟ್ರಸ್ಟ್​ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ

Published : Sep 15, 2021, 10:39 PM IST
ತಿರುಪತಿ ತಿರುಮಲ ಟ್ರಸ್ಟ್​ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ

ಸಾರಾಂಶ

* ತಿರುಪತಿ ತಿರುಮಲ ಟ್ರಸ್ಟ್​ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ * ಎಸ್.ಆರ್. ವಿಶ್ವನಾಥ್ ಅವರನ್ನು  TTD ಟ್ರಸ್ಟ್  ಸದಸ್ಯರನ್ನಾಗಿ ನೇಮಕ ಮಾಡಿ ಆಂಧ್ರ ಸಿಎಂ ಆದೇಶ * ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಧನ್ಯವಾದ ತಿಳಿಸಿದ ವಿಶ್ವನಾಥ್

ಬೆಂಗಳೂರು, (ಸೆ.15): ತಿರುಪತಿ ತಿರುಮಲ ಟ್ರಸ್ಟ್​ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆಯ್ಕೆಯಾಗಿದ್ದಾರೆ.

ಯಲಹಂಕ ಕ್ಷೇತ್ರದ ಶಾಸಕರು ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಎಸ್.ಆರ್. ವಿಶ್ವನಾಥ್ ಅವರನ್ನು  ತಿರುಮಲ ತಿರುಪತಿ ಟ್ರಸ್ಟ್  ಸದಸ್ಯರನ್ನಾಗಿ ನೇಮಕ ಮಾಡಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಆದೇಶ ಹೊರಡಿಸಿದ್ದಾರೆ. 

ಈ ಹಿಂದೆ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್‌ ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿರುವುದಕ್ಕೆ ವಿಶ್ವನಾಥ್ ಅವರು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಮತ್ತು ಆಂಧ್ರಪ್ರದೇಶ ಸರ್ಕಾರದ ಪಂಚಾಯತ್ ರಾಜ್ ಮತ್ತು ಗಣಿ ಸಚಿವ ರಾಮಚಂದ್ರರೆಡ್ಡಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ