ಬೆಂಗಳೂರಿಗೆ ಪ್ರವಾಸಿಗಳಂತೆ ಬಂದು ಶ್ರೀಗಂಧ ಕಳ್ಳ ಸಾಗಣೆ ಮಾಡುವ ಕೇರಳ ಸ್ಮಗ್ಲರ್ಸ್; ಭರ್ಜರಿ 82 ಕೆಜಿ ಗಂಧ ಜಪ್ತಿ!

Published : Jul 21, 2026, 01:26 PM IST
Bengaluru Sandalwood Smuggling

ಸಾರಾಂಶ

ಬೆಂಗಳೂರು ಸಿಸಿಬಿ ಪೊಲೀಸರು, ಪ್ರವಾಸಿಗರಂತೆ ನಟಿಸಿ ಕೇರಳದಿಂದ ಟ್ರಾಲಿ ಬ್ಯಾಗ್‌ಗಳಲ್ಲಿ ಶ್ರೀಗಂಧವನ್ನು ಕಳ್ಳಸಾಗಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಈ ಬೃಹತ್ ಜಾಲದಿಂದ ಸುಮಾರು 82 ಕೆಜಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 20 ಲಕ್ಷಕ್ಕೂ ಅಧಿಕವಾಗಿದೆ.

ಬೆಂಗಳೂರು (ಜು.21): ರಾಜ್ಯದ ಗಡಿ ದಾಟಿ ಶ್ರೀಗಂಧದ (Sandalwood) ಕಳ್ಳಸಾಗಾಟ ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. ಕೇರಳದಿಂದ ಪ್ರವಾಸಿಗರಂತೆ ನಟಿಸಿ ಟ್ರಾಲಿ ಬ್ಯಾಗ್‌ಗಳಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು (Arrest), ಲಕ್ಷಾಂತರ ರೂಪಾಯಿ ಮೌಲ್ಯದ ಮಾಲು ವಶಪಡಿಸಿಕೊಂಡಿದ್ದಾರೆ.

ಪ್ರವಾಸಿಗರ ವೇಷದಲ್ಲಿ ಕಳ್ಳಸಾಗಾಟ:

ಬಂಧಿತ ಆರೋಪಿಗಳನ್ನು ಕೇರಳ ಮೂಲದ ಅಬ್ದುಲ್ ರೆಹಮಾನ್, ಮೊಹಮದ್ ಶಾನ್, ವಿನು ಅಂತೋಣಿ ಹಾಗೂ ಜಾಫರ್ ಎಂದು ಗುರುತಿಸಲಾಗಿದೆ. ಈ ಗ್ಯಾಂಗ್ ಶ್ರೀಗಂಧವನ್ನು ಸಾಗಿಸಲು ಅತ್ಯಂತ ಚಾಣಾಕ್ಷ ದಾರಿಯನ್ನು ಆಯ್ದುಕೊಂಡಿತ್ತು. ಅಂತರರಾಜ್ಯ ಚೆಕ್ ಪೋಸ್ಟ್ (Check Posts) ಗಳಲ್ಲಿ ಪೊಲೀಸರು ವಾಹನಗಳನ್ನು ತೀವ್ರವಾಗಿ ತಪಾಸಣೆ ನಡೆಸುತ್ತಾರೆ ಎಂಬ ಕಾರಣಕ್ಕೆ, ಇವರು ಪ್ರವಾಸಿಗರ ರೀತಿ (Acting like Tourists) ವರ್ತಿಸುತ್ತಿದ್ದರು.

ಶ್ರೀಗಂಧದ ಮರಗಳನ್ನು ಕತ್ತರಿಸಿ ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ, ಅವುಗಳನ್ನು ಪ್ರವಾಸಿಗರು ಬಳಸುವ ದೊಡ್ಡ ದೊಡ್ಡ ಟ್ರಾಲಿ ಬ್ಯಾಗ್‌ಗಳಲ್ಲಿ (Trolley Bags) ತುಂಬುತ್ತಿದ್ದರು. ನಂತರ ಸಾಮಾನ್ಯ ಪ್ರಯಾಣಿಕರಂತೆ ಬಸ್ ಏರಿ ಬೆಂಗಳೂರಿಗೆ ಬರುತ್ತಿದ್ದರು. ಬ್ಯಾಗ್ ನೋಡಿದರೆ ಯಾರಿಗೂ ಅನುಮಾನ ಬಾರದಂತೆ ಪ್ಲ್ಯಾನ್ ಮಾಡಿದ್ದರು.

ಬೆಂಗಳೂರಿನಲ್ಲಿ ಮಾರಾಟಕ್ಕೆ ಸಂಚು :

ಕೇರಳದಿಂದ ಸಾಗಿಸಿ ತಂದಿದ್ದ ಈ ಶ್ರೀಗಂಧವನ್ನು ಬೆಂಗಳೂರಿನಲ್ಲಿ ತಮ್ಮ ಕಾಯಂ ಗ್ರಾಹಕರಿಗೆ (Customers) ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಈ ತಂಡ ಸ್ಕೆಚ್ ಹಾಕಿತ್ತು. ಆದರೆ, ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತಂಡ ರಚಿಸಿ ದಾಳಿ ನಡೆಸಿದ್ದಾರೆ. ಗ್ರಾಹಕರಿಗೆ ಮಾಲು ತಲುಪಿಸುವ ಮುನ್ನವೇ ನಾಲ್ವರು ಕಿಲಾಡಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳ ಜಪ್ತಿ:

ಬಂಧಿತರಿಂದ ಒಟ್ಟು 82 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು (Sandalwood Pieces) ವಶಪಡಿಸಿಕೊಳ್ಳಲಾಗಿದೆ. ಇದರ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 20.9 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಎರೆಡು ಕಾರುಗಳು (Cars) ಮತ್ತು 5 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ.

ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ತೀವ್ರ ಹುಡುಕಾಟ (Search Operation) ನಡೆಸುತ್ತಿದ್ದಾರೆ. ಬಡಬಗ್ಗರು ಅಥವಾ ಸಣ್ಣ ಕಳ್ಳರ ಬದಲಿಗೆ ಈ ರೀತಿ ವ್ಯವಸ್ಥಿತವಾಗಿ ಟ್ರಾಲಿ ಬ್ಯಾಗ್ ಮೂಲಕ ಶ್ರೀಗಂಧ ಲೂಟಿ ಮಾಡುತ್ತಿದ್ದ ಜಾಲ ಪತ್ತೆಯಾಗಿರುವುದು ಪೊಲೀಸರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೊ ಬಳಸಿ ಬೆಂಗಳೂರಿನ ಹಿರಿಯ ನಾಗರಿಕನಿಗೆ ₹6.88 ಲಕ್ಷ ದೋಖಾ!
ಬೆಂಗಳೂರಿನ 8 ಕಡೆ ಇಡಿ ದಾಳಿ: ಐಸಿಸ್ ಉಗ್ರ ಸಂಘಟನೆಗೆ ಫಂಡಿಂಗ್ ಜಾಲ ಪತ್ತೆ, ವಿದೇಶದಲ್ಲಿ ಲೆಕ್ಕವಿಲ್ಲದಷ್ಟು ಆಸ್ತಿ!