ಡಿಸೆಂಬರ್ ಒಳಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಪೂರ್ಣ: ಕೇಂದ್ರ ಸಚಿವ ನಿತಿನ್ ಗಡ್ಕರಿ

Published : Feb 09, 2024, 04:19 AM IST
ಡಿಸೆಂಬರ್ ಒಳಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಪೂರ್ಣ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಾರಾಂಶ

ರಾಷ್ಟ್ರೀಯ ಹೆದ್ದಾರಿ-774ರ ಕಾಮಗಾರಿಗೆ ತಮಿಳುನಾಡು ಸರ್ಕಾರ ಸೂಕ್ತ ಸಹಕಾರ ನೀಡಿದರೆ ಡಿಸೆಂಬರ್ 2024ರೊಳಗೆ ಮುಗಿಯಲಿದೆ. ರಸ್ತೆ ಕಾಮಗಾರಿಯಲ್ಲಿ ಆಗುತ್ತಿರುವ ತೊಂದರೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ನೊಂದಿಗೆ ಚರ್ಚಿಸಲಾಗಿದೆ, ಲೋಕಾರ್ಪಣೆಯಾದ ಬಳಿಕ ಉಭಯ ನಗರಗಳ ಸಂಚಾರದ ಅವಧಿ 2 ಗಂಟೆಗೆ ತಗ್ಗಲಿದೆ'' ಎಂದು ಮಾಹಿತಿ ನೀಡಿದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ 

ನವದೆಹಲಿ(ಫೆ.09): ವರ್ಷಾಂತ್ಯದೊಳಗೆ ಬೆಂಗಳೂರು ಮತ್ತು ಚೆನ್ನೈ ನಡುವಿನ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.

ಲೋಕಸಭೆಯಲ್ಲಿ ಡಿಎಂಕೆ ಸಂಸದ ದಯಾನಿಧಿ ಮಾರನ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ''ರಾಷ್ಟ್ರೀಯ ಹೆದ್ದಾರಿ-774ರ ಕಾಮಗಾರಿಗೆ ತಮಿಳುನಾಡು ಸರ್ಕಾರ ಸೂಕ್ತ ಸಹಕಾರ ನೀಡಿದರೆ ಡಿಸೆಂಬರ್ 2024ರೊಳಗೆ ಮುಗಿಯಲಿದೆ. ರಸ್ತೆ ಕಾಮಗಾರಿಯಲ್ಲಿ ಆಗುತ್ತಿರುವ ತೊಂದರೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ನೊಂದಿಗೆ ಚರ್ಚಿಸಲಾಗಿದೆ, ಲೋಕಾರ್ಪಣೆಯಾದ ಬಳಿಕ ಉಭಯ ನಗರಗಳ ಸಂಚಾರದ ಅವಧಿ 2 ಗಂಟೆಗೆ ತಗ್ಗಲಿದೆ'' ಎಂದು ಮಾಹಿತಿ ನೀಡಿದರು.

2024ರ ಮಾರ್ಚ್‌ನಿಂದ ಜಿಪಿಎಸ್‌ ಆಧಾರಿತ ಟೋಲ್‌ ಕಲೆಕ್ಷನ್‌: ಗಡ್ಕರಿ

ಸದ್ಯ ಬೆಂಗಳೂರಿನಿಂದ ಚೆನ್ನೈ ನಡುವೆ ಸಂಚರಿಸಲು ಸುಮಾರು 5ರಿಂದ 6 ಗಂಟೆ ಬೇಕಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ