ಬೆಂಗಳೂರು: ತಿರುಚಿದ ವಿಡಿಯೋ ತೋರಿಸಿ ನಿವೃತ್ತ ಎಂಜಿನಿಯರ್‌ಗೆ ₹2 ಕೋಟಿ ಸುಲಿಗೆ ಯತ್ನಿಸಿದ ಆರೋಪಿಗಳು ಅರೆಸ್ಟ್

Published : Apr 05, 2025, 07:40 AM ISTUpdated : Apr 05, 2025, 07:54 AM IST
ಬೆಂಗಳೂರು: ತಿರುಚಿದ ವಿಡಿಯೋ ತೋರಿಸಿ ನಿವೃತ್ತ ಎಂಜಿನಿಯರ್‌ಗೆ ₹2 ಕೋಟಿ ಸುಲಿಗೆ ಯತ್ನಿಸಿದ ಆರೋಪಿಗಳು ಅರೆಸ್ಟ್

ಸಾರಾಂಶ

ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ತಿರುಚಿದ ವಿಡಿಯೋ ತೋರಿಸಿ ₹2 ಕೋಟಿ ಸುಲಿಗೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (ಏ.5):  ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ತಿರುಚಿದ ವಿಡಿಯೋ ತೋರಿಸಿ ₹2 ಕೋಟಿ ಸುಲಿಗೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಅಜಯ್ ಮತ್ತು ಅಭಿ ಬಂಧಿತರು. ಆರೋಪಿಗಳು 68 ವರ್ಷದ ನಿವೃತ್ತ ಕಾರ್ಯಪಾಲಕ ಎಂಜಿನಿಯರ್‌ಗೆ ಈ ₹2 ಕೋಟಿಗೆ ಬೇಡಿಕೆ ಇರಿಸಿದ್ದರು. ಕೊನೆಗೆ ₹40 ಲಕ್ಷ ನೀಡಿದರೆ ವಿಡಿಯೋ ಡಿಲೀಟ್‌ ಮಾಡುವುದಾಗಿ ಬ್ಲ್ಯಾಕ್‌ ಮೇಲ್ ಮಾಡಿದ್ದರು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ವಿವರ:

ದಾವಣಗೆರೆ ಮೂಲದ ನಿವೃತ್ತ ಕಾರ್ಯಪಾಲಕ ಎಂಜಿನಿಯರ್‌ ಕೋರಮಂಗಲದಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ ನಿವೃತ್ತ ಎಂಜಿನಿಯರ್‌ಗೆ ಕರೆ ಮಾಡಿದ್ದ ಆರೋಪಿ ಅಜಯ್‌, ನೀವು 25 ವರ್ಷದ ಯುವತಿ ಜತೆಗೆ ಇರುವ ಅಶ್ಲೀಲ ವಿಡಿಯೋಗಳು ನಮ್ಮ ಬಳಿ ಇವೆ. ಈ ವಿಡಿಯೋಗಳನ್ನು ಡಿಲೀಟ್‌ ಮಾಡಲು ₹2 ಕೋಟಿ ನೀಡಬೇಕು ಎಂದು ಬೆದರಿಸಿದ್ದಾರೆ.

ದಾವಣಗೆರೆಯ ಜಿಲ್ಲಾ ಕೋರ್ಟ್‌ ಬಳಿಗೆ ಕರೆಸಿಕೊಂಡಿದ್ದ ಆರೋಪಿಗಳು ತಿರುಚಿದ ಅಶ್ಲೀಲ ವಿಡಿಯೋಗಳನ್ನು ತೋರಿಸಿದ್ದಾರೆ. ಕೆಲ ದಿನಗಳ ಬಳಿಕ ಮತ್ತೆ ದಾವಣಗೆರೆಯ ಹದಡಿ ರಸ್ತೆಯ ಹೋಟೆಲ್‌ವೊಂದರ ಬಳಿ ಕರೆಸಿಕೊಂಡಿದ್ದ ಆರೋಪಿಗಳು ಅಶ್ಲೀಲ ವಿಡಿಯೋ ವಿಚಾರ ಪ್ರಸ್ತಾಪಿಸಿದ್ದರು. ಬಳಿಕ ಈ ತಿರುಚಿದ ವಿಡಿಯೋಗಳನ್ನು ವಾಟ್ಸಾಪ್‌ಗೆ ಕಳುಹಿಸಿ ನಂತರ ಡಿಲೀಟ್‌ ಮಾಡಿದ್ದರು. 

ವೈರಲ್‌ ಮಾಡುವುದಾಗಿ ಬ್ಲ್ಯಾಕ್‌ಮೇಲ್‌ ಆರಂಭ

ಮಾ.16ರಂದು ವಾಟ್ಸಾಪ್‌ ಕರೆ ಮಾಡಿದ್ದ ಆರೋಪಿಗಳು ₹2 ಕೋಟಿ ನೀಡಬೇಕು. ಇಲ್ಲವಾದರೆ, ಈ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬ್ಲ್ಯಾಕ್ ಮೇಲ್‌ ಮಾಡಿದ್ದರು. ಮಾ.17ರಂದು ಕೋರಮಂಗಲದ ಕಾಫಿ ಬಾರ್‌ ಬಳಿ ನಿವೃತ್ತ ಎಂಜಿನಿಯರ್‌ನನ್ನು ಭೇಟಿಯಾಗಿದ್ದ ಆರೋಪಿಗಳು ₹2 ಕೋಟಿ ಬದಲು ₹40 ಲಕ್ಷ ಕೊಟ್ಟರೆ ವಿಡಿಯೋ ಡಿಲೀಟ್‌ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಕದ್ದು ಮುಚ್ಚಿ ವ್ಯಾಟ್ಸಾಪ್ ಖಾತೆ ನೋಡಿ ಪತಿಯನ್ನು ಜೈಲಿಗೆ ಕಳುಹಿಸಿದ ಪತ್ನಿ

ಆರೋಪಿಗಳ ಕಾಟ ತಾಳಲಾರದೆ ನಿವೃತ್ತ ಎಂಜಿನಿಯರ್‌ ಕೋರಮಂಗಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್