
ಬೆಂಗಳೂರು (ಮೇ.4): ಕಾರು ಖರೀದಿಸಿ ಸಾಲದ ಕಂತು ಪಾವತಿಸಲಾಗದೆ ಮನನೊಂದು ಕ್ಯಾಬ್ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ ಮೂಲದ ದೇವರಾಜ್(21) ಆತ್ಮಹತ್ಯೆಗೆ ಶರಣಾದವರು. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ದೇವರಾಜ್ ಚಿಕ್ಕಬಾಣಾವಾರದ ಗಣಪತಿನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದೇವರಾಜ್ ಒಂದು ವರ್ಷದ ಹಿಂದೆ ಬ್ಯಾಂಕ್ನಿಂದ ಸಾಲ ಪಡೆದು ಕಾರು ಖರೀದಿಸಿ ಬಾಡಿಗೆಗೆ ಕಾರು ಓಡಿಸಿಕೊಂಡು ಜೀವನ ಮಾಡುತ್ತಿದ್ದರು.
ಇದನ್ನೂ ಓದಿ: ಕಾರಿನಿಂದ ಇಳಿಯುತ್ತಲೇ ಗುದ್ದಿ ಓಡಿದ ಕಾರು, ವಕೀಲ ಸಾವು, ಅಪಘಾತವಾ? ಕೊಲೆಯಾ?
ದೇವರಾಜ್ ಇತ್ತೀಚೆಗೆ ಸರಿಯಾಗಿ ಬಾಡಿಗೆ ಸಿಗದೆ ಎರಡು ತಿಂಗಳಿಂದ ಕಾರಿನ ಸಾಲದ ಕಂತು ಪಾವತಿಸಿರಲಿಲ್ಲ. ಹೀಗಾಗಿ ಬ್ಯಾಂಕಿನವರು ಸಾಲದ ಬಾಕಿ ಕಂತು ಪಾವತಿಸುವಂತೆ ನೋಟಿಸ್ ಜಾರಿಗೊಳಿಸಿದ್ದರು ಎನ್ನಲಾಗಿದೆ. ಸಾಲದ ಕಂತು ತೀರಿಸಲಾಗದೆ ಮನನೊಂದು ದೇವರಾಜ್ ಏ.29ರಂದು ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ