
ಬೆಂಗಳೂರು (ಮೇ.10) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 2.5 ಕೋಟಿ ರು ವೆಚ್ಚದಲ್ಲಿ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಜಾರಿಗೊಳಿಸಿದೆ. ಈಗಾಗಲೇ ಕಾರಾಗೃಹದ ಭದ್ರತೆಗೆ ಕೃತ್ತಕ ಬುದ್ಧಿಮತ್ತೆ (ಎಐ) ಕ್ಯಾಮೆರಾಗಳ ಅಳವಡಿಕೆ ಹಾಗೂ ಸಂದರ್ಶಕರಿಗೆ ಡಿಜಿಟಲ್ ಟೋಕನ್ ಬಳಿಕ ಈಗ ಅಕ್ರಮ ಚಟುವಟಿಕೆಗಳ ತಡೆಗೆ ಇಲಾಖೆ ಮತ್ತೊಂದು ಹೆಜ್ಜೆ ಇಟ್ಟಿದೆ. ಕಾರಾಗೃಹದಲ್ಲಿ ಕೈದಿಗಳ ಹಾಜರಾತಿಗೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜೈಲಿನ ಪ್ರತಿ ಬ್ಯಾರಕ್, ಸಂದರ್ಶಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್, ಅಡುಗೆ ಕೋಣೆ, ಗ್ರಂಥಾಲಯ, ಮೈದಾನ, ಕರಕುಶಲ ಕೈಗಾರಿಕೆಗಳು ಹಾಗೂ ಬೇಕರಿ ಸೇರಿದಂತೆ ಇತೆರೆ ಬಯೋಮೆಟ್ರಿಕ್ ಅಳವಡಿಸಲಾಗಿದೆ. ಆ ಪ್ರದೇಶಳ ಪ್ರವೇಶ ಹಾಗೂ ನಿರ್ಗಮನದ ವೇಳೆ ಸಜಾ ಹಾಗೂ ವಿಚಾರಣಾಧೀನ ಕೈದಿಗಳು ಬಯೋಮೆಟ್ರಿಕ್ ಬಳಸಬೇಕಿದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
10 ದಿನ ಕೈದಿಗಳಿಗೆ ಜೈಲಿನಲ್ಲಿ ಧ್ಯಾನ ಶಿಬಿರ:
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ 10 ದಿನಗಳ ವಿಶೇಷ ಧ್ಯಾನ ಶಿಬಿರವನ್ನು ಕಾರಾಗೃಹ ಅಧಿಕಾರಿಗಳು ಆಯೋಜಿಸಿದ್ದಾರೆ. ಶ್ರೀ ಸತ್ಯನಾರಾಯಣ ಗೋಯೆಂಕಾ ಅವರ ವಿಪಶ್ಯನ ಧ್ಯಾನ ಮತ್ತು ಸಂಶೋಧನಾ ಕೇಂದ್ರದ ಸಹಭಾಗಿತ್ವದಲ್ಲಿ ಥ್ಯಾನ ತರಬೇತಿ ಆಯೋಜಿಸಲಾಗಿದ್ದು, ಮೊದಲ ಹಂತದಲ್ಲಿ ಕಾರ್ಯಾಗಾರದಲ್ಲಿ 25 ಕೈದಿಗಳು ಪಾಲ್ಗೊಂಡಿದ್ದಾರೆ. ಸಮಾಜದಲ್ಲಿ ಸಮತಾಭಾವದಿಂದ ಬದುಕುವುದು ಮತ್ತು ಶಾಂತಿ ವಾತಾವರಣ ನಿರ್ಮಿಸುವ ಕುರಿತು ಕೈದಿಗಳಿಗೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ