
ಬೆಂಗಳೂರು (ನ.27) : ಅಜೆಂಡಾ ಇಟ್ಟುಕೊಂಡು ಕಂಬಳ, ಜಲ್ಲಿಕಟ್ಟಿನಂತ ಸಾಂಪ್ರದಾಯಿಕ ಕ್ರೀಡೆಯನ್ನು ನಿಷೇಧಗೊಳಿಸಲು ಮುಂದಾಗುವವರ ವಿರುದ್ಧ ಪಕ್ಷ, ಜಾತಿಗಳನ್ನು ಮೀರಿ ಒಂದಾಗಿ ಹೋರಾಡುವ ಅಗತ್ಯವಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ‘ಬೆಂಗಳೂರು ಕಂಬಳ-ನಮ್ಮ ಕಂಬಳದಲ್ಲಿ ಪಾಲ್ಗೊಂಡು ಮಾತನಾಡಿ, ಬೆಂಗಳೂರಿನವರು ಕಂಬಳ ಕಣ್ತುಂಬಿಕೊಳ್ಳುವಂತೆ ಮಾಡಿರುವ ಈ ಕಾರ್ಯಕ್ರಮ ಅಪರೂಪ. ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆದಿರುವುದು ಸಂತಸದ ವಿಚಾರ. ಜಲ್ಲಿಕಟ್ಟು, ಕಂಬಳ ಸಾಂಪ್ರದಾಯಿಕ ಶೈಲಿಯ ಕ್ರೀಡೆಗಳನ್ನು ಬೇರೆ ರೀತಿಯ ಅಜೆಂಡಾ ಇಟ್ಟುಕೊಂಡು ನಿಲ್ಲಿಸಲು ಪ್ರಯತ್ನ ಮಾಡುತ್ತಿರುವುದನ್ನು ನೋಡಿದ್ದೇವೆ. ಆದರೆ ಎಲ್ಲರೂ ಪಕ್ಷ, ಭಿನ್ನಾಭಿಪ್ರಾಯಗಳನ್ನು ಮೀರಿ ಇಂತವುಗಳನ್ನು ಸಂಘಟಿತವಾಗಿ ಎದುರಿಸಬೇಕು ಎಂದರು.
ಬೆಂಗಳೂರು ಕಂಬಳಕ್ಕೆ ಅದ್ಧೂರಿ ತೆರೆ; ಕಾಂತಾರದಲ್ಲಿ ರಿಷಬ್ ಓಡಿಸಿದ್ದ ಕೋಣಗಳಿಗೆ ಪ್ರಥಮ ಬಹುಮಾನ!
ಮಾಜಿ ಸಚಿವ ಅರವಿಂದ ಲಿಂಬಾವಳಿ, ಕಂಬಳದ ಮೂಲಕ ಸನಾತನ ಧರ್ಮದ ಸಂಸ್ಕೃತಿಯನ್ನು ಪಸರಿಸುತ್ತಿರುವ ಕಾರ್ಯ ವಿಶೇಷ. ಇದರಂತೆ ದೈವಪೂಜೆ, ಕೋಲಗಳನ್ನು ಕೂಡ ಎಲ್ಲೆಡೆ ತೆಗೆದುಕೊಂಡು ಹೋಗಬೇಕು. ಕಂಬಳವನ್ನು ಒಂದೇ ವರ್ಷಕ್ಕೆ ನಿಲ್ಲಿಸದೆ ಪ್ರತಿ ವರ್ಷ ಇದು ನಡೆಯುವಂತಾಗಲಿ ಎಂದು ಹಾರೈಸಿದರು.
ಶಾಸಕ ಹ್ಯಾರಿಸ್ ನಲಪಾಡ್ ಮಾತನಾಡಿ, ಕಂಬಳ ಪ್ರತಿ ವರ್ಷ ನಡೆಯಬೇಕು. ನಗರದಲ್ಲಿ ಕಾಯಂ ಆಗಿ ಕಂಬಳ ನಡೆಸಲು ಸಾಧ್ಯವಾಗುವಂತೆ ಜಾಗವನ್ನು ನಿಗದಿಸಿ ಸರ್ಕಾರ ಕೊಡಬೇಕೆಂದು ಕಂಬಳ ಸಮಿತಿ ಒತ್ತಾಯಿಸಲಿ. ಅದಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ