ವಿಕೇಂಡ್ ಕರ್ಫ್ಯೂ ಬಗ್ಗೆ ಜನರಿಗೆ ಪೊಲೀಸ್ ಕಮೀಷನರ್ ಎಚ್ಚರಿಕೆ

Published : Apr 23, 2021, 05:34 PM ISTUpdated : Apr 23, 2021, 05:43 PM IST
ವಿಕೇಂಡ್ ಕರ್ಫ್ಯೂ ಬಗ್ಗೆ ಜನರಿಗೆ ಪೊಲೀಸ್ ಕಮೀಷನರ್ ಎಚ್ಚರಿಕೆ

ಸಾರಾಂಶ

ವಿಕೇಂಡ್ ಕರ್ಫ್ಯೂ ಜಾರಿ ಬಗ್ಗೆ ಜನರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಎಚ್ಚರಿಕೆ ಜೊತೆಗೆ ಸಲಹೆಯನ್ನೂ ಕೊಟ್ಟಿದ್ದಾರೆ.

ಬೆಂಗಳೂರು, (ಏ.23): ಇಂದಿನಿಂದ ಅಂದ್ರೆ ಶುಕ್ರವಾರ ರಾತ್ರಿ 9ರಿಂದ ಬೆಳಗ್ಗೆ 6 ಗಂಟೆ ವರೆಗೆ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಾಗಲಿದೆ. 

ಈ ಹಿನ್ನೆಯಲ್ಲಿ ಕಟ್ಟು ನಿಟ್ಟಾಗಿ ವಿಕೇಂಡ್ ಕರ್ಫ್ಯೂ ಜಾರಿಯಾಗುತ್ತದೆ. ಅನಗತ್ಯವಾಗಿ ಓಡಾಟಕ್ಕೆ ಅವಕಾಶ ಇರುವುದಿಲ್ಲ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ವೀಕೆಂಡ್ ಕರ್ಫ್ಯೂ: ಚುನಾವಣಾ ಪ್ರಚಾರಕ್ಕೆ ಬ್ರೇಕ್..!
 
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟು ನಿಟ್ಟಾಗಿ ವಿಕೇಂಡ್ ಕರ್ಫ್ಯೂ ಜಾರಿಯಾಗುತ್ತದೆ. ಅನಗತ್ಯವಾಗಿ ಓಡಾಟಕ್ಕೆ ಅವಕಾಶ ಇರುವುದಿಲ್ಲ.  ನಿಯಮ ಉಲ್ಲಂಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

 ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಅದೇಶ ಯಥಾವತ್ತು ಜಾರಿಯಾಗುತ್ತೆ. ಅದೇಶದಲ್ಲಿ ಸೂಚಿಸಿರುವ ಸೇವೆಗಳು ಮಾತ್ರ ಲಭ್ಯವಿರುತ್ತೆ. ಮದುವೆಗಳಿಗೆ ಅವಕಾಶ ಇದ್ದರೂ ಮದುವೆ ಕಾರ್ಡ್ ಹಿಡಿದುಕೊಂಡು ಊರೆಲ್ಲ ಸುತ್ತುವಂತಿಲ್ಲ ಎಂದರು. ಸಾಧ್ಯವಾದರೆ ಇಂದೇ (ಶುಕ್ರವಾರ) ಮದುವೆ ಜಾಗವನ್ನ ತಲುಪಿ. ಸೋಮವಾರ ವಾಪಸ್ಸು ಬನ್ನಿ ಎಂದು ಸಲಹೆ ನೀಡಿದ್ದಾರೆ.

ಕಳೆದ ಬಾರಿ ಕೆಲವರು ಸುಳ್ಳು ಪಾಸ್ ಪಡೆದು ತಿರುಗಾಡಿದ್ದರು. ಕೆಲವರು ಫುಡ್ ಡೆಲವರಿ ಬಾಯ್ ವೇಷದಲ್ಲಿ ತಿರುಗಾಡಲು ಪ್ರಯತ್ನಿಸುತ್ತಾರೆ. ಇಂತಹವರನ್ನ ಯಾವುದೇ ಮುಲಾಜಿಲ್ಲದೆ ಬಂಧನ ಮಾಡಲಾಗುತ್ತೆ. ವಿಕೇಂಡ್ ಕರ್ಪ್ಯೂ ವೇಳೆ ಅಗತ್ಯ ಸೇವೆಗಳು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ