'ನನಗೂ ಗೊತ್ತಿದೆ ಕಣ್ರೀ ಕಾನೂನು..' ಇನ್ಸ್‌ಪೆಕ್ಟರ್ ಮೇಲೆಯೇ ಹಲ್ಲೆ ಯತ್ನ, ಹೆಡ್ ಕಾನ್‌ಸ್ಟೇಬಲ್‌ ಅಮಾನತು, ಏನಿದು ಪ್ರಕರಣ?

Kannadaprabha News, Ravi Janekal |   | Kannada Prabha
Published : Aug 29, 2025, 08:37 AM IST
Bengaluru Crime

ಸಾರಾಂಶ

ಮಾಂಸದ ಹೋಟೆಲ್‌ನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಆಕ್ಷೇಪಿಸಿದ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ ಹೆಡ್ ಕಾನ್‌ಸ್ಟೇಬಲ್ ಮಧುಸೂದನ್ ಅವರನ್ನು ಅಮಾನತುಗೊಳಿಸಲಾಗಿದೆ. 

ಬೆಂಗಳೂರು (ಆ.29): ತನ್ನ ಸಂಬಂಧಿ ನಡೆಸುತ್ತಿದ್ದ ಮಾಂಸದ ಹೋಟೆಲ್‌ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮದ್ಯ ಮಾರಾಟಕ್ಕೆ ಆಕ್ಷೇಪಿಸಿದ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿ ಪುಂಡಾಟಿಕೆ ನಡೆಸಿದ ಆರೋಪದ ಮೇರೆಗೆ ಹೆಡ್ ಕಾನ್‌ಸ್ಟೇಬಲ್‌ವೊಬ್ಬರ ತಲೆದಂಡವಾಗಿದೆ.

ಚಾಮರಾಜಪೇಟೆ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್‌ ಮಧುಸೂದನ್‌ ಅಮಾನತುಗೊಂಡಿದ್ದು, ಕಳೆದ ಭಾನುವಾರ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ಕೆ.ಪಿ. ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರ ಜತೆ ಆತ ಉದ್ಧಟತನದಿಂದ ವರ್ತಿಸಿದ್ದ. ಈ ಬಗ್ಗೆ ಪಿಐ ದೂರು ಆಧರಿಸಿ ಕೆ.ಪಿ. ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪಶ್ಚಿಮ ವಿಭಾಗದ ಡಿಸಿಪಿ ಎಸ್‌. ಗಿರೀಶ್, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಮಧುಸೂದನ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಾಗಡಿ ರಸ್ತೆಯ ಟೋಲ್‌ ಗೇಟ್ ಬಳಿ ಮಧುಸೂದನ್ ಅವರ ಸಂಬಂಧಿ ಮಾಂಸದ ಹೋಟೆಲ್‌ ನಡೆಸುತ್ತಿದ್ದಾರೆ. ಈ ಹೋಟೆಲ್‌ನಲ್ಲಿ ಊಟದ ಜತೆ ಅಕ್ರಮವಾಗಿ ಮದ್ಯ ಸಹ ಮಾರಾಟವಾಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಇತ್ತು. ಅಲ್ಲದೆ ಪಾದಚಾರಿ ಮಾರ್ಗವನ್ನು ಸಹ ಅತಿಕ್ರಮಿಸಿಕೊಂಡಿದ್ದರಿಂದ ಸಾರ್ವಜನಿಕರು ಓಡಾಟಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಹೋಟೆಲ್ ಬಳಿ ಪರಿಶೀಲನೆಗೆ ತೆರಳಿದ ಪಿಐ ಗೋವಿಂದರಾಜು ಅವರಿಗೆ ನನಗೂ ಗೊತ್ತಿದೆ ಕಣ್ರೀ ಕಾನೂನು ಎಂದೆಲ್ಲ ಮಾತನಾಡಿ ಮಧುಸೂದನ್ ಉದ್ಧಟತನ ತೋರಿಸಿದ್ದರು ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!